9:06 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!!

08/09/2021, 09:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ಭಕ್ತರನ್ನ ಸ್ವಾಗತಿಸುತ್ತಿವೆ. ಅಸಂಖ್ಯಾತ ಹೆಜ್ಜೇನು ಹುಳುಗಳು ಬೃಹತ್ ಗೂಡು(ಹುಟ್ಟು)ಕಟ್ಟಿದ್ದು ಶುಭವೋ ಅಶುಭವೋ ಭಕ್ತರಿಗೆ ತೊಂದರೆ ಕೊಡುತ್ತವೆಯೋ..!?ಎಂಬ ಆತಂಕ ಗ್ರಾಮದ ದೈವಸ್ಥರಲ್ಲಿ ಮನೆ ಮಾಡಿತ್ತು.ಅದಕ್ಕಾಗಿ ಪ್ರಾರಂಭದಲ್ಲಿಯೇ ಈ ಬಗ್ಗೆ ಗ್ರಾಮದ ದೈವಸ್ಥರು, ಶ್ರೀ ವೀರಭದ್ರ ದೇವರಲ್ಲಿ ಶುಭ ಅಶುಭ ಕುರಿತು ಮತ್ತು ಜೇನು ಹುಟ್ಟು ತೆರವು ಗೊಳಿಸಲು ಅನುಮತಿ ಕೋರಿ ಹೂ ಫಲ ಕೇಳಿದ್ದಾರೆ. ಶ್ರೀವೀರಭದ್ರೇಶ್ವರ ಸ್ವಾಮಿ ಎಡಭಾಗದ ಹೂ ಕೊಡೋ ಮೂಲಕ, ಭಕ್ತರಿಗೆ ಅಭಯ ನೀಡಿದ್ದು ಹಾಗೂ ಜೇನು ಹುಳುಗಳಿಗೂ ಆಶ್ರಯ ಹಸ್ತ ನೀಡಿದ್ದಾರೆ.

ಈ ಹೆಜ್ಜೇನು ಕಳೆದ ಆರು ತಿಂಗಳಿಂದ ದೇವಸ್ಥಾನದ ಮಧ್ಯ ಭಾಗದಲ್ಲಿ ನಿರ್ಮಾಣವಾಗಿದೆ.

ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಬೃಹತ್ ಗಾತ್ರದ ಹೆಜ್ಜೇನು ಹುಳುಗಳು ಹಾರಾಡುತ್ತಿರುತ್ತವೆ. ದೇವರ ದರ್ಶನಕ್ಕೆ ಬರುವ ಭಕ್ತರನ್ನ ನಯವಾಗಿ ಸ್ಪರ್ಶಿಸುವ ನಿರುಪದ್ರವಿಗಳಾಗಿದ್ದು, ಹೆಜ್ಜೇನು ಹುಳುಗಳು ಭಕ್ತರನ್ನು ಸ್ವಾಗತಿಸಿ ಕೊಳ್ಳುತ್ತಿವೆ ಎಂಬಂತೆ  ಸನ್ನಿವೇಶ ಸೃಷ್ಠಿಯಾಗಿದೆ. ಕಳೆದ ಆರು ತಿಂಗಳಿಂದ ನಿರ್ಮಾಣವಾಗಿರುವ ಹೆಜ್ಜೇನಿನ ಬೃಹತ್ ಗೂಡು ಬಲು ಆಕರ್ಷಕವಾಗಿದ್ದು, ಹುಳುಗಳಿಂದ ಯಾರಿಗೂ ಯಾವೂದೇ ಕಾರಣಕ್ಕೂ ತೊಂದರೆ ಆಗಿಲ್ಲ. ಹೆಜ್ಜೆನು ಗೂಡು ನಿರ್ಮಾಣದಿಂದ ಶ್ರೀವೀರಭದ್ರೇಶ್ವರ ಭಕ್ತರ ಪಾಲಿಗೂ ಶುಭ ಶಕುನವಾಗಿ ಪರಿಣಮಿಸಿದೆ ಯಂತೆ, ದೇವಸ್ಥಾನದಲ್ಲಿ ಹೆಜ್ಜೇನು ವಾಸ ಮಾಡಿರುವುದರಿಂದಾಗಿ ಸಕಲರಿಗೂ ಹಿತವಾಗಲಿದೆ ಎಂದು ಆಸ್ತಿಕರು ಆಶಾಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು