12:27 PM Thursday29 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ

ಇತ್ತೀಚಿನ ಸುದ್ದಿ

ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ

29/01/2026, 12:16

ಬೆಂಗಳೂರು(repprterkarnataka.com): ಕನ್ನಡ ಭಾಷೆಯನ್ನು ಕೇವಲ ಸಾಹಿತ್ಯಿಕ ಆಯಾಮದಿಂದ ಗ್ರಹಿಸದೇ ಅದಕ್ಕೆ ಇತರ ಆಯಾಮಗಳೂ ಇವೆ ಎಂದು ಭಾವಿಸಿದಾಗ ಅದು ಇನ್ನಷ್ಟು ಗಟ್ಟಿಯಾಗುವ ಸಾಧ್ಯತೆಯನ್ನು ಹೊಂದುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.


ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜ್ಞಾನದ ಅಂತಾರಾಷ್ಟ್ರೀಕರಣದ ಇಂದಿನ ಸಂದರ್ಭದಲ್ಲಿ ಆರೋಗ್ಯ, ತಂತ್ರಜ್ಞಾನ, ಕೃಷಿ ಸೇರಿದಂತೆ ಕನ್ನಡಕ್ಕೆ ಇರುವ ಬಹು ಆಯಾಮಗಳನ್ನು ಗುರುತಿಸಿಕೊಂಡು ನಮ್ಮ ವಿವೇಕ ವೃದ್ಧಿಗೆ ಕ್ರಮವಹಿಸಬೇಕಾಗುತ್ತದೆ. ಆಗಷ್ಟೇ ಕನ್ನಡ ಭಾಷೆ ತನ್ನ ಸಮಗ್ರತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದರು.
ತಂತ್ರಜ್ಞಾನದ ವಿವೇಕವು ಇಲ್ಲಿಯವರೆಗೆ ಕನ್ನಡಕ್ಕೆ ಸಮರ್ಪಕವಾಗಿ ಬಾರದ ಕಾರಣ ಸೃಷ್ಠಿಯಾಗಿರುವ ಬಹುದೊಡ್ಡ ಕಂದರವು ಸಾಮಾನ್ಯ ಕನ್ನಡಿಗರನ್ನು ಕನ್ನಡದ ನೆಲದಲ್ಲಿಯೇ ಪರಕೀಯರನ್ನಾಗಿಸಿದೆ ಎಂದ ಬಿಳಿಮಲೆ, ಆರೋಗ್ಯ ಕ್ಷೇತ್ರದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ಜನ-ಸಾಮಾನ್ಯರು ಮತ್ತು ಜ್ಞಾನದ ನಡುವಿನ ಕಂದರವನ್ನು ಕಿರಿದಾಗಿಸಲು ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯವನ್ನು ಅಭಿವೃದ್ಧಿಪಡಿಸಲು ಹೆಚ್ಚಾಗಿ ಗಮನ ಹರಿಸಬೇಕು. ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಅಲ್ಲಿನ ಸವಾಲುಗಳು, ಸಾಮಾನ್ಯ ರೋಗಗಳ ಬಗ್ಗೆ ಜನರಿಗೆ ಸಾಮಾನ್ಯ ತಿಳುವಳಿಕೆಯನ್ನು ಒದಗಿಸುವ ಮಾದರಿಯಲ್ಲಿ ಹಾಗೂ ಹೊಸ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಕುರಿತಂತೆ ಕನ್ನಡದಲ್ಲಿ ಪುಸ್ತಕಗಳನ್ನು ಹೊರತರುವಲ್ಲಿ ಗಮನ ಹರಿಸಬೇಕು ಎಂದು ನುಡಿದರು.
ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಹಿತ್ಯಾಸಕ್ತ ವಿದ್ಯಾರ್ಥಿಗಳು ಸಹ ಈ ಸಾಹಿತ್ಯ ಸೃಷ್ಠಿಗೆ ಕೈ ಜೋಡಿಸುವಂತೆ ವಿಶ್ವವಿದ್ಯಾಲಯವು ಗಮನ ಹರಿಸುವುದು ಮುಖ್ಯವೆಂದ ಬಿಳಿಮಲೆ, ಅಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನವನ್ನು ನೀಡಲು ಸಹ ವಿಶ್ವವಿದ್ಯಾಲಯ ಆಲೋಚಿಸಬಹುದು ಎಂದರು.

*ಲಾಂಛನದಲ್ಲಿ ಕನ್ನಡ:* ಆರೋಗ್ಯ ವಿಶ್ವವಿದ್ಯಾಲಯದ ಲಾಂಛನದಲ್ಲಿ ಕನ್ನಡಕ್ಕೆ ಎರಡನೇಯ ಸ್ಥಾನವನ್ನು ನೀಡಿರುವುದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕದ ಪ್ರಕಾರ ಸರಿಯಾದ ಕ್ರಮವಲ್ಲ ಎಂದ ಬಿಳಿಮಲೆ, ಕೂಡಲೇ ಈ ವಿಷಯವನ್ನು ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ವಿಶ್ವವಿದ್ಯಾಲಯದ ಲಾಂಛನದಲ್ಲಿ ಕನ್ನಡಕ್ಕೆ ಮೊದಲ ಸ್ಥಾನವನ್ನು ನೀಡಲು ಸೂಚಿಸಿದರು. ಅಂತೆಯೇ ಇದೇ ಲಾಂಛನದಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆ ಕುರಿತಂತೆ ಕೇವಲ ಆಂಗ್ಲ ಭಾಷೆಯಲ್ಲಿ ಮಾಹಿತಿ ಇದ್ದು, ಇದನ್ನು ಸಹ ಸರಿಪಡಿಸಲು ತಿಳಿಸಿದರು.

*ದ್ವಿಭಾಷೆಯಲ್ಲಿರಲಿ ಅಂಕಪಟ್ಟಿಗಳು:* ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಅಂಕಪಟ್ಟಿಗಳಲ್ಲಿ ಕೇವಲ ಆಂಗ್ಲ ಭಾಷೆ ಮಾತ್ರ ಇದ್ದು, ಇದು ಕನ್ನಡದಲ್ಲಿಯೂ ಇರುವ ರೀತಿಯಲ್ಲಿ ಪರಿಷ್ಕರಿಸಬೇಕೆಂದು ಸೂಚಿಸಿದ ಬಿಳಿಮಲೆ, ವಿಶ್ವವಿದ್ಯಾಲಯದ ವತಿಯಿಂದ ಪದವಿಪ್ರಮಾಣ ಪತ್ರಗಳನ್ನು ದ್ವಿಭಾಷೆಯಲ್ಲಿ ವಿತರಿಸುತ್ತಿರುವ ಕ್ರಮವನ್ನು ಶ್ಲಾಘಿಸಿದರು.
ಕನ್ನಡೇತರ ವಿದ್ಯಾರ್ಥಿಗಳಿಗೆ ಬಳಕೆ ಕನ್ನಡ ಪಠ್ಯವನ್ನು ನಿಗದಿಪಡಿಸಲಾಗಿದ್ದು, ಅಂಕಗಳಿಕೆಗೆ ಇದನ್ನು ಪರಿಗಣಿಸದ ಕಾರಣ ಕನ್ನಡ ಕಲಿಯುವಿಕೆಯಲ್ಲಿ ಗಂಭೀರತೆಯನ್ನು ತರಲಾಗುತ್ತಿಲ್ಲವೆಂಬ ಅಂಶದ ಕುರಿತು ಆತಂಕ ವ್ಯಕ್ತಪಡಿಸಿದ ಬಿಳಿಮಲೆ, ಕನ್ನಡೇತರ ವಿದ್ಯಾರ್ಥಿಗಳು ಇದನ್ನು ಕಲಿತು ಪರೀಕ್ಷೆಯಲ್ಲಿ ತೇರ್ಗಡೆ ಅಂಕಗಳನ್ನು ಗಳಿಸುವುದು ಕಡ್ಡಾಯ ಮಾಡಬೇಕೆನ್ನುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಆಲೋಚಿಸಲು ಸೂಚನೆ ನೀಡಿದರು. ವಿಶ್ವವಿದ್ಯಾಲಯದಲ್ಲಿ ಅಧಿಕಾರಿ-ಸಿಬ್ಬಂದಿಗಳನ್ನೊಳಗೊಂಡ ಕನ್ನಡ ಘಟಕಗಳನ್ನು ಸ್ಥಾಪಿಸಬೇಕು, ಜಾಲತಾಣದಲ್ಲಿ ಕನ್ನಡ ಭಾಷೆ ಡಿಫಾಲ್ಟ್ ಆಗಿರುವಂತೆ ನೋಡಿಕೊಳ್ಳಬೇಕು ಎನ್ನುವ ಹಲವು ಕನ್ನಡಪರವಾದ ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ., ಕುಲಸಚಿವ ಸಿ. ಅರ್ಜುನ್ ಒಡೆಯರ್, ಕುಲಸಚಿವ (ಮೌಲ್ಯಮಾಪನ) ಡಾ. ರಿಯಾಜ್ ಬಾಷಾ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಆಪ್ತ ಕಾರ್ಯದರ್ಶಿ ಟಿ.ಎಸ್. ಫಣಿಕುಮಾರ್, ವೈದ್ಯರಾದ ಡಾ ಸಿ.ಎ ಕಿಶೋರ್ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು