12:49 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ

30/01/2026, 21:20

ಬೆಂಗಳೂರು(reporterkarnataka.com): ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ಮೊದಲ ಚಿತ್ರ “ಫೈರ್ ಫ್ಲೈ” 17 ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನವಾಯಿತು. ವಂಶಿಕೃಷ್ಣ ಶ್ರೀನಿವಾಸ್ ನಿರ್ದೇಶನದಲ್ಲಿ ಆನಂದ್ ನೀನಾಸಂ, ರಚನಾ ಇಂದರ್, ಅಚ್ಯುತ್ ಕುಮಾರ್,‌ ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಎಲ್ಲರ ಮೆಚ್ಚುಗೆ ಪಡೆಯಿತು.

ಪ್ರದರ್ಶನದ ನಂತರ ಮಾತನಾಡಿದ ನಿರ್ಮಾಪಕಿ ನಿವೇದಿತ ಶಿವರಾಜಕುಮಾರ್,17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಿದ್ದು ಬಹಳ ಖುಷಿಯಾಗಿದೆ. ಆಯೋಜಕರಿಗೆ ಧನ್ಯವಾದ ಎಂದರು.
ಬೆಂಗಳೂರು ಚಿತ್ರೋತ್ಸವದಲ್ಲಿ ಕನ್ನಡಿಗರ ಜೊತೆಗೆ ಹೊರ ರಾಜ್ಯ ಹಾಗೂ ದೇಶದವರು ಸಹ ನಮ್ಮ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದು ಬಹಳ ಸಂತೋಷವಾಗಿದೆ. ನಮ್ಮ ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಲಭ್ಯವಿದೆ ಎಂದು ನಿರ್ದೇಶಕ ವಂಶಿಕೃಷ್ಣ ಶ್ರೀನಿವಾಸ್ ತಿಳಿಸಿದರು. ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು