9:10 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಮಹಿಳೆಯರ ಚಿನ್ನಾಭರಣ, ಬ್ಯಾಗ್ ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ಖದೀಮನ ಬಂಧನ: 6.47 ಲಕ್ಷದ ಚಿನ್ನಾಭರಣ ವಶ

31/01/2026, 19:31

ಮಂಗಳೂರು(reporterkarnataka.com): ​ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್‌ಗಳನ್ನೇ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ಅಂತರಜಿಲ್ಲಾ ಕಳ್ಳನೊಬ್ಬನನ್ನು ನಗರದ ಬರ್ಕೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತನನ್ನು ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿ ಮಹಮ್ಮದ್ ಇಮ್ರಾನ್ (44) ಎಂದು ಗುರುತಿಸಲಾಗಿದೆ. ಈತನಿಂದ ಪೊಲೀಸರು 6,47,920 ರೂಪಾಯಿ ಮೌಲ್ಯದ 46.28 ಗ್ರಾಂ ಚಿನ್ನದ ಒಡವೆಗಳು ಹಾಗೂ 5,000 ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
​ವಯಸ್ಸಾದವರೇ ಈತನ ಟಾರ್ಗೆಟ್.
*ಕೃತ್ಯದ ಶೈಲಿ ಹೀಗಿತ್ತು:*
ಆರೋಪಿಯು ಅತ್ಯಂತ ಚಾಣಾಕ್ಷತನದಿಂದ ಕೃತ್ಯ ಎಸಗುವ ರೂಢಿಗತ ಕಳ್ಳನಾಗಿದ್ದಾನೆ. ಜನವರಿ 23ರಂದು ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ತೆರಳಲು ಸಜ್ಜಾಗಿದ್ದ ಇಬ್ಬರು ವಯಸ್ಸಾದ ಮಹಿಳೆಯರು ಮತ್ತು ಹಿರಿಯ ನಾಗರಿಕರಿದ್ದ ತಂಡವನ್ನು ಈತ ಗಮನಿಸಿದ್ದ. ಅವರು ಬಸ್ಸಿನಲ್ಲಿ ಕುಳಿತು ತಮ್ಮ ಟ್ರ್ಯಾಲಿ ಬ್ಯಾಗ್ ಅನ್ನು ಪಕ್ಕದಲ್ಲಿ ಇರಿಸಿದ್ದಾಗ, ಅವರ ಗಮನ ಬೇರೆಡೆ ಇದ್ದ ಸಮಯ ನೋಡಿ ಕ್ಷಣಾರ್ಧದಲ್ಲಿ ಬ್ಯಾಗ್ ಎಗರಿಸಿ ಪರಾರಿಯಾಗಿದ್ದ. ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ಮೈಮರೆತಾಗ ಅಥವಾ ಬಸ್ ಹತ್ತುವ ಧಾವಂತದಲ್ಲಿದ್ದಾಗ ಅವರ ಬೆಲೆಬಾಳುವ ಬ್ಯಾಗ್‌ಗಳನ್ನು ಎಗರಿಸುವುದೇ ಈತನ ಕೃತ್ಯದ ಪ್ರಮುಖ ಶೈಲಿಯಾಗಿದೆ.

*​11 ಪ್ರಕರಣಗಳ ಅಪರಾಧಿ:*
ಬಂಧಿತ ಇಮ್ರಾನ್ ಕೇವಲ ಮಂಗಳೂರಿನಲ್ಲಿ ಮಾತ್ರವಲ್ಲದೆ ಹಾಸನ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತನ್ನ ಕೃತ್ಯ ಮುಂದುವರಿಸಿದ್ದ. ಈತನ ಮೇಲೆ ಹಾಸನದ ವಿವಿಧ ಠಾಣೆಗಳಲ್ಲಿ 7, ಮೈಸೂರಿನಲ್ಲಿ 1 ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಬಸ್ ನಿಲ್ದಾಣದ ಬ್ಯಾಗ್ ಕಳ್ಳತನ ಮಾತ್ರವಲ್ಲದೆ ಮನೆಗಳ್ಳತನದ ಪ್ರಕರಣಗಳೂ ಸೇರಿವೆ. ಈ ಹಿಂದೆ ಹಾಸನದಲ್ಲಿ ಮನೆಗಳ್ಳತನ ಪ್ರಕರಣದಲ್ಲಿ ಜಾಮೀನು ಪಡೆದು ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಕೂಡ ಹೊರಡಿಸಿತ್ತು.
ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
​ಯಾರ ನೇತೃತ್ವದಲ್ಲಿ ಕಾರ್ಯಾಚರಣೆ?
ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ, ಎಸಿಪಿ ಕೇಂದ್ರ ಉಪವಿಭಾಗದ ಉಸ್ತುವಾರಿಯಲ್ಲಿ ಬರ್ಕೆ ಠಾಣಾ ಪಿಎಸ್ಐ ವಿನಾಯಕ ತೊರಗಲ್ ಮತ್ತು ಸಿಬ್ಬಂದಿಗಳಾದ ಸುಜನ್, ವಾಸುದೇವ,

ಇತ್ತೀಚಿನ ಸುದ್ದಿ

ಜಾಹೀರಾತು