3:36 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್ ನಲ್ಲಿ ಅಂತ್ಯಕ್ರಿಯೆ

01/02/2026, 19:47

ಬೆಂಗಳೂರು(reporterkarnataka.com): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಖ್ಯಾತ ಉದ್ಯಮಿ ಡಾ. ಸಿ. ಜೆ. ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರೌಂಡ್ ನಲ್ಲಿ ನಡೆಯಿತು. ಅಂತಿಮ ದರ್ಶನಕ್ಕಾಗಿ ಡಾ ಸಿ ಜೆ ರಾಯ್ ಅವರ ಪಾರ್ಥಿವ ಶರೀರವನ್ನು ಸಹೋದರ ಬಾಬು ಜೋಸೆಫ್ ಒಡೆತನದ ಕೋರಮಂಗಲದ ವೈಟ್ ಹೌಸ್ ನಲ್ಲಿ ಇಡಲಾಗಿತ್ತು. ಅಂತ್ಯಕ್ರಿಯೆಯಲ್ಲಿ ನಾಡಿನ ಪ್ರಮುಖ ಉದ್ಯಮಿಗಳು ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ಭಾಗವಹಿಸಿದ್ದರು.
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ. ಉದ್ಯಮಿ ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗದ ಹಿನ್ನೆಲೆ ಪೊಲೀಸರು BNS 174ಸಿ ಅಡಿಯಲ್ಲಿ UDR ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಕಾನ್ಫಿಡೆಂಟ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಟಿ. ಎ. ಜೋಸೆಫ್ ಅವರು ತನಿಖೆಗೆ ಮನವಿ ಸಲ್ಲಿಸಿದ್ದಾರೆ. ದೂರಿನಲ್ಲಿ ಐಟಿ ಅಧಿಕಾರಿಗಳ ವಿರುದ್ಧ ಯಾವುದೇ ನೇರ ಆರೋಪ ಮಾಡಿಲ್ಲ ಎಂದು ತಿಳಿದುಬಂದಿದೆ.
ದೂರಿನ ಪ್ರಕಾರ ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಸಿ ಜೆ ರಾಯ್ ಅವರು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಕಚೇರಿಗೆ ಐಟಿ ಅಧಿಕಾರಿಗಳಿಗೆ ಹೇಳಿಕೆ ನೀಡಲು ಬಂದಿದ್ದರು. ಬಳಿಕ ಅವರು ತಮ್ಮ ಕ್ಯಾಬಿನ್ ಗೆ ತೆರಳಿದ್ದು ಸ್ವಲ್ಪ ಸಮಯದ ನಂತರ ತಾಯಿಯೊಂದಿಗೆ ಮಾತನಾಡಬೇಕೆಂದು ತಿಳಿಸಿದ್ದಾರೆ. ಸುಮಾರು ಹತ್ತು ನಿಮಿಷಗಳ ಬಳಿಕ ಕ್ಯಾಬಿನ್ ಗೆ ಹೋದಾಗ ಯಾರನ್ನೂ ಒಳಗೆ ಬಿಡಬೇಡಿ ಎಂದು ಸೂಚನೆ ನೀಡಿದ್ದಾಗಿ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.



ಮತ್ತೆ ಹತ್ತು ನಿಮಿಷಗಳ ನಂತರ ಕ್ಯಾಬಿನ್ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಾಗಿಲು ಒಳಗಿನಿಂದ ಲಾಕ್ ಆಗಿದ್ದರಿಂದ ಅದನ್ನು ಮುರಿದು ಒಳಗೆ ಪ್ರವೇಶಿಸಿದಾಗ ಡಾ ರಾಯ್ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಶರ್ಟ್ ಮೇಲೆ ರಕ್ತವಿದ್ದು ದೇಹ ತಣ್ಣಗಾಗಿತ್ತು. ತಕ್ಷಣ ಅಂಬ್ಯುಲೆನ್ಸ್ ಕರೆಸಿ ಅವರನ್ನು ನಾರಾಯಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಪರೀಕ್ಷಿಸಿದಾಗ ನಾಡಿಮಿಡಿತ ಇಲ್ಲ ಎಂದು ದೃಢಪಡಿಸಿದರು.
ಡಾ ಸಿ ಜೆ ರಾಯ್ ಆತ್ಮಹತ್ಯೆಗೆ ಯಾವ ಒತ್ತಡ ಕಾರಣವಾಗಿರಬಹುದು ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ದೂರುದಾರರು ಮನವಿ ಮಾಡಿದ್ದಾರೆ. ಈ ನಡುವೆ ಸಹೋದರ ಸಿ ಜೆ ಬಾಬು ಮಾತನಾಡಿ ರಾಯ್ ಅವರಿಗೆ ಯಾವುದೇ ಸಾಲವೂ, ಶತ್ರುಗಳೂ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಆದಾಯ ತೆರಿಗೆ ಇಲಾಖೆಯ ಒತ್ತಡ ಇತ್ತು ಎಂದು ಹೇಳಿದ್ದಾರೆ. ಸಾವಿನ ಮುನ್ನದಿನ ಬೆಳಿಗ್ಗೆ ರಾಯ್ ಅವರು ಕರೆ ಮಾಡಿ ಒತ್ತಡ ಹೆಚ್ಚಾಗಿದೆ ಎಂದು ಹೇಳಿದ್ದರು ಎಂದು ಬಾಬು ತಿಳಿಸಿದ್ದಾರೆ.
ಕಂಪನಿ ಲಾಭದಲ್ಲೇ ಇತ್ತು. ಯಾವುದೇ ಆರ್ಥಿಕ ಸಂಕಷ್ಟ ಇರಲಿಲ್ಲ ಎಂದು ಕುಟುಂಬ ಸ್ಪಷ್ಟನೆ ನೀಡಿದೆ. ರಾಯ್ ಅವರು ಬೆಂಗಳೂರು ಕೇರಳ ತಮಿಳುನಾಡು ಸೇರಿದಂತೆ ದೇಶ ವಿದೇಶಗಳಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಕಳೆದ ಎರಡು ತಿಂಗಳಿಂದ ಕೇರಳ ಐಟಿ ಅಧಿಕಾರಿಗಳು ಅವರ ಮೇಲೆ ತನಿಖೆ ನಡೆಸುತ್ತಿದ್ದು ಕಳೆದ ಮೂರು ದಿನಗಳಿಂದ ಬೆಂಗಳೂರಿನ ಕಚೇರಿಯಲ್ಲಿ ಐಟಿ ದಾಳಿ ನಡೆಯುತ್ತಿತ್ತು. ಇದೇ ಸಂದರ್ಭದಲ್ಲಿ ರಾಯ್ ಅವರು ಕಚೇರಿಯಲ್ಲೇ ಪಿಸ್ತೂಲ್ ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶಾದ್ಯಂತ ಆಘಾತ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು