6:46 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್

02/02/2026, 18:56

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಕೇರಳ–ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆಯಲ್ಲಿ ದರೋಡೆಕೋರರ ಹಾವಳಿ ಮಿತಿಮೀರಿದ್ದು, ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವಿಶೇಷವಾಗಿ ಚಿನ್ನದ ಉದ್ಯಮಿಗಳನ್ನೇ ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿರುವ ‘ಕೇರಳದ ಮಲ್ಲು ಗ್ಯಾಂಗ್’ ಮಟ್ಟಹಾಕಲು ಕರ್ನಾಟಕ ಪೊಲೀಸರು ಈಗ ಹೊಸ ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಹದ್ದಿನ ಕಣ್ಣಿಟ್ಟಿದ್ದಾರೆ.

*ಏನಿದು ಪ್ರಕರಣ?:* ಕೇರಳದ ಚಿನ್ನದ ಉದ್ಯಮಿಗಳಾದ ಜಮ್ಸಿದ್ ಮತ್ತು ಫೈಸಲ್ ಎಂಬುವವರು ಕರ್ನಾಟಕದಲ್ಲಿ ಚಿನ್ನ ಮಾರಾಟ ಮಾಡಿ 10 ಲಕ್ಷ ರೂಪಾಯಿ ನಗದಿನೊಂದಿಗೆ ಕೇರಳಕ್ಕೆ ಮರಳುತ್ತಿದ್ದರು. ಈ ವೇಳೆ ಗುಂಡ್ಲುಪೇಟೆ ಗಡಿ ಸಮೀಪದ ಕಾಡಿನ ಹಾದಿಯಲ್ಲಿ ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ತಂಡ, ಉದ್ಯಮಿಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ 10 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದೆ.
ದರೋಡೆ ನಡೆದ ಸ್ಥಳದಲ್ಲಿ ಮೊಬೈಲ್ ನೆಟ್‌ ವರ್ಕ್ ಸಿಗದಿರುವುದನ್ನೇ ಬಂಡವಾಳ ಮಾಡಿಕೊಂಡ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ. ಇನ್ನು ಈ ಘಟನೆ ಜನವರಿ 10ರಂದು ನಡೆದಿದ್ದರೂ, ಸಂತ್ರಸ್ತರು ಜನವರಿ 27ರಂದು ತಡವಾಗಿ ದೂರು ನೀಡಿದ್ದಾರೆ. ಈ ವಿಳಂಬವು ಪೊಲೀಸರಲ್ಲಿ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದ್ದು, ದರೋಡೆಕೋರರು ಉದ್ಯಮಿಗಳಿಗೆ ಪರಿಚಿತರೇ ಎಂಬ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ.

*ಪೊಲೀಸರ ಬಿಗಿ ಕ್ರಮ:* ಈ ದರೋಡೆ ಗ್ಯಾಂಗ್‌ ಗಳ ಉಪಟಳಕ್ಕೆ ಬ್ರೇಕ್ ಹಾಕಲು ಪೊಲೀಸರು ಈಗ ಕಾರ್ಯಪ್ರವೃತ್ತರಾಗಿದ್ದಾರೆ.

*ಹೊಸ ಚೆಕ್ ಪೋಸ್ಟ್:* ಮದ್ದೂರು ಚೆಕ್ ಪೋಸ್ಟ್ ಜೊತೆಗೆ ಮತ್ತೊಂದು ಹೊಸ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಪ್ರತಿಯೊಂದು ವಾಹನವನ್ನೂ ತಪಾಸಣೆ ಮಾಡಲಾಗುತ್ತಿದೆ.
ಹದ್ದಿನ ಕಣ್ಣು: ಕೇರಳದಿಂದ ಕರ್ನಾಟಕಕ್ಕೆ ಮತ್ತು ಕರ್ನಾಟಕದಿಂದ ಕೇರಳಕ್ಕೆ ಸಂಚರಿಸುವ ಅನುಮಾನಾಸ್ಪದ ವಾಹನಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

*ಹಳೆಯ ಕೇಸ್‌ ಗಳ ತನಿಖೆ:* ಕಳೆದ ಎರಡು ತಿಂಗಳ ಹಿಂದೆ ನಡೆದ 1.25 ಕೆಜಿ ಚಿನ್ನದ ದರೋಡೆ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಕಿಂಗ್‌ ಪಿನ್ ಪತ್ತೆಗೆ ಶೋಧ ಮುಂದುವರಿದಿದೆ.
ಗಡಿ ಭಾಗದಲ್ಲಿ ಉದ್ಯಮಿಗಳ ಸುರಕ್ಷತೆಗಾಗಿ ಪೊಲೀಸರು ಅಲರ್ಟ್ ಆಗಿದ್ದು, ಮಲ್ಲು ಗ್ಯಾಂಗ್‌ನ ಬಾಲ ಕತ್ತರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು