9:49 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್

08/09/2021, 19:15

ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. 

ನಾನು ಡ್ರಗ್ಸ್ ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಆಗಿರೋದ್ರಿಂದ ನಾವು ಪಾರ್ಟಿ ಮಾಡಲು ಹೇಗೆ ಸಾಧ್ಯ ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಎಂದರು.

ನನ್ನ ಲೈಫ್ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ. ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ, ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವರಿಗೆ ಒಳ್ಳೆಯದಾಗಲಿ ಎಂದು ದುಃಖ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು