1:45 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್

08/09/2021, 19:15

ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. 

ನಾನು ಡ್ರಗ್ಸ್ ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಆಗಿರೋದ್ರಿಂದ ನಾವು ಪಾರ್ಟಿ ಮಾಡಲು ಹೇಗೆ ಸಾಧ್ಯ ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಎಂದರು.

ನನ್ನ ಲೈಫ್ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ. ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ, ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವರಿಗೆ ಒಳ್ಳೆಯದಾಗಲಿ ಎಂದು ದುಃಖ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು