9:13 PM Sunday2 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್

08/09/2021, 19:15

ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. 

ನಾನು ಡ್ರಗ್ಸ್ ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಆಗಿರೋದ್ರಿಂದ ನಾವು ಪಾರ್ಟಿ ಮಾಡಲು ಹೇಗೆ ಸಾಧ್ಯ ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಎಂದರು.

ನನ್ನ ಲೈಫ್ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ. ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ, ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವರಿಗೆ ಒಳ್ಳೆಯದಾಗಲಿ ಎಂದು ದುಃಖ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು