5:14 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಸೋಮವಾರಪೇಟೆ: 1 ಕೆಜಿ 628 ಗ್ರಾಂ ಗಾಂಜಾ ವಶ; ಯುವತಿ ಸಹಿತ 5 ಮಂದಿ ಆರೋಪಿಗಳ ಬಂಧನ

05/02/2026, 12:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರದಲ್ಲಿ ದಾಳಿ ನಡೆಸಿ 4 ಮಧ್ಯವೆಸನಿಗಳನ್ನು ಹಾಗೂ ಶನಿವಾರ ಸಂತೆ ಠಾಣಾ ವ್ಯಾಪ್ತಿಯ ಕೊಡ್ಲಿಪೇಟೆಯಲ್ಲಿ ಒಬ್ಬ ಆರೋಪಿಯನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳಿಂದ 1ಕೆಜಿ 628 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಸೋಮವಾರಪೇಟೆ ಹಾಗೂ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣದಲ್ಲಿ ಯುವತಿ ಒಬ್ಬಳು ಈ ಮಾದಕ ವ್ಯಸನಕ್ಕೆ ಬಲಿಯಾಗಿರೋದು ಮಾತ್ರ ದುರಂತವಾಗಿದೆ.

*ಬಂಧಿತ ಆರೋಪಿಗಳು:*

* ಮಾದಾಪುರದ ಆಕಾಶ್ ಎಂ ಸಿ (21)

.ಮಡಿಕೇರಿಯ ಹೊಸ ಬಡಾವಣೆಯ ತ್ರಿಶೂಲ್ ಪಿ. ಎಲ್ (20)

.ಮಡಿಕೇರಿಯ ಮಂಗಳದೇವಿ ನಗರದ ನಿತ್ಯ ಎಂ.ಸಿ (20)

.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಾಲಸೂರು ವಿನ ಧನುಷ್ ಕೆ. ಆರ್ (22).ಕೊಡ್ಲಿಪೇಟೆಯ ಶಾಂತಪುರದ ಭರತ್ ಕೆ ಎಂ (28)

*ತನಿಖಾ ತಂಡ*
ಸೋಮವಾರಪೇಟೆ ಡಿ.ಎಸ್ಪಿ ಚಂದ್ರಶೇಖರ್, ಶನಿವಾರ ಸಂತೆ ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣರಾಜು. ಜಿ, ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ರಾಜು ಪಿ.ಕೆ, ಶನಿವಾರ ಸಂತೆ ಸಬ್ ಇನ್ಸ್ಪೆಕ್ಟರ್ ಚಂದ್ರ ಹೆಚ್. ವೈ, ಪೊಲೀಸ್ ಇನ್ಸ್ಪೆಕ್ಟರ್, ಗೋವಿಂದ್ ರಾಜ್ ಎಚ್ ಸಿ, ಸುಂಟಿಕೊಪ್ಪ ಪಿಎಸ್ಐ ಮೋಹನ್ ರಾಜು. ಪಿ, ಸೋಮವಾರಪೇಟೆ ಪಿಎಸ್ಐ ಗೋಪಾಲ ಎಂ. ಎ, ಡಿ ಸಿ.ಆರ್ ಬಿಯ ಗೋಪಾಲ ಎಚ್. ಸಿ, ನಿರಂಜನ್ ಹೆಚ್ ಸಿ
ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಿ ಬಿಂದುಮಣಿ ಆರ್.ಎನ್ ರವರು ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು