12:50 PM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಸೋಮವಾರಪೇಟೆ: 1 ಕೆಜಿ 628 ಗ್ರಾಂ ಗಾಂಜಾ ವಶ; ಯುವತಿ ಸಹಿತ 5 ಮಂದಿ ಆರೋಪಿಗಳ ಬಂಧನ

05/02/2026, 12:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರದಲ್ಲಿ ದಾಳಿ ನಡೆಸಿ 4 ಮಧ್ಯವೆಸನಿಗಳನ್ನು ಹಾಗೂ ಶನಿವಾರ ಸಂತೆ ಠಾಣಾ ವ್ಯಾಪ್ತಿಯ ಕೊಡ್ಲಿಪೇಟೆಯಲ್ಲಿ ಒಬ್ಬ ಆರೋಪಿಯನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳಿಂದ 1ಕೆಜಿ 628 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಸೋಮವಾರಪೇಟೆ ಹಾಗೂ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣದಲ್ಲಿ ಯುವತಿ ಒಬ್ಬಳು ಈ ಮಾದಕ ವ್ಯಸನಕ್ಕೆ ಬಲಿಯಾಗಿರೋದು ಮಾತ್ರ ದುರಂತವಾಗಿದೆ.

*ಬಂಧಿತ ಆರೋಪಿಗಳು:*

* ಮಾದಾಪುರದ ಆಕಾಶ್ ಎಂ ಸಿ (21)

.ಮಡಿಕೇರಿಯ ಹೊಸ ಬಡಾವಣೆಯ ತ್ರಿಶೂಲ್ ಪಿ. ಎಲ್ (20)

.ಮಡಿಕೇರಿಯ ಮಂಗಳದೇವಿ ನಗರದ ನಿತ್ಯ ಎಂ.ಸಿ (20)

.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಾಲಸೂರು ವಿನ ಧನುಷ್ ಕೆ. ಆರ್ (22).ಕೊಡ್ಲಿಪೇಟೆಯ ಶಾಂತಪುರದ ಭರತ್ ಕೆ ಎಂ (28)

*ತನಿಖಾ ತಂಡ*
ಸೋಮವಾರಪೇಟೆ ಡಿ.ಎಸ್ಪಿ ಚಂದ್ರಶೇಖರ್, ಶನಿವಾರ ಸಂತೆ ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣರಾಜು. ಜಿ, ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ರಾಜು ಪಿ.ಕೆ, ಶನಿವಾರ ಸಂತೆ ಸಬ್ ಇನ್ಸ್ಪೆಕ್ಟರ್ ಚಂದ್ರ ಹೆಚ್. ವೈ, ಪೊಲೀಸ್ ಇನ್ಸ್ಪೆಕ್ಟರ್, ಗೋವಿಂದ್ ರಾಜ್ ಎಚ್ ಸಿ, ಸುಂಟಿಕೊಪ್ಪ ಪಿಎಸ್ಐ ಮೋಹನ್ ರಾಜು. ಪಿ, ಸೋಮವಾರಪೇಟೆ ಪಿಎಸ್ಐ ಗೋಪಾಲ ಎಂ. ಎ, ಡಿ ಸಿ.ಆರ್ ಬಿಯ ಗೋಪಾಲ ಎಚ್. ಸಿ, ನಿರಂಜನ್ ಹೆಚ್ ಸಿ
ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಿ ಬಿಂದುಮಣಿ ಆರ್.ಎನ್ ರವರು ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು