6:47 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

*ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

05/02/2026, 18:50

ಉಡುಪಿ(reporterkarnataka.com): ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಬೆಂಗಳೂರು ಮತ್ತು ಕರ್ನಾಟಕ ಕರಾವಳಿ ನಡುವೆ ಓಡಿಸುವ ಅಗತ್ಯವನ್ನು ಮನವರಿಕೆ ಮಾಡಿದರು.
ನವದೆಹಲಿಯಲ್ಲಿ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಶ್ರೀನಿವಾಸ ಪೂಜಾರಿ, ಕರಾವಳಿ ಮತ್ತು ಬೆಂಗಳೂರು ನಡುವೆ ಪ್ರತಿದಿನ 600 ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಾವಿರಾರು ಪ್ರಯಾಣಿಕರನ್ನು ಕರೆದೊಯ್ಯುತ್ತವೆ. ಈ ಸ್ಥಳಗಳ ನಡುವೆ ನೂರಾರು ಖಾಸಗಿ ವಾಹನಗಳಲ್ಲೂ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ, ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಕಾರವಾರ ನಡುವೆ ಮಂಗಳೂರು ಮತ್ತು ಉಡುಪಿ ಮೂಲಕ ಅರೆ-ಹೈಸ್ಪೀಡ್ ರೈಲನ್ನು ಪರಿಚಯಿಸುವುದು ಅತ್ಯಗತ್ಯ ಎಂದು ಸಂಸದರು ಹೇಳಿದರು.
ಅದರೊಂದಿಗೆ, ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆಯ 734 ಕಿ.ಮೀ ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕೂಡಲೇ ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು. ಹಲವು ವರ್ಷಗಳಿಂದ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆಯ ಕೊರತೆ ಇದ್ದು, ಇದೀಗ ನರೇಂದ್ರ ಮೋದಿಯವರ ಸರಕಾರದ ತುರ್ತು ಕ್ರಮಗಳಿಂದಾಗಿ ಸಾಕಷ್ಟು ಪ್ರಗತಿ ಕಂಡು ಬರುತ್ತಿದ್ದು, ಇನ್ನೂ ಹೊಸ ರೈಲುಗಳ ಅಗತ್ಯವಿರುವುದರಿಂದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ನೆರವು ನೀಡಬೇಕೆಂದು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು