6:17 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಗೋಣಿಕೊಪ್ಪ: ಕೇರಳದ ಖಾಸಗಿ ಬಸ್ -ಬೈಕ್ ಅಪಘಾತ: ಸವಾರರಿಬ್ಬರ ದಾರುಣ ಸಾವು

06/02/2026, 21:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ಮೂಲದ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರೂ ಬೈಕ್ ಸವಾರರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ದಲ್ಲಿ ನಡೆದಿದೆ.ಕಳೆದ ರಾತ್ರಿ ಗೋಣಿಕೊಪ್ಪದ ಮುಖ್ಯ ರಸ್ತೆಯ ಉಮಾ ಮಹೇಶ್ವರಿ ದೇವಾಲಯ ಬಳಿ ತೆರಳುತ್ತಿದ್ದ ಬೈಕ್ ಗೆ ಏಕಾಎಕಿ ಬಸ್ ಅಪ್ಪಳಿಸಿದ್ದು ಗೋಣಿಕೊಪ್ಪಲಿನ ಸುಲೈಮಾನ್(32)ಹಾಗೂ ಪೌಲೋಸ್(28) ಮೃತ ರಾಗಿದ್ದಾರೆ.
ದೇವಾಲಯದ ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ
ಸುಲೈಮಾನ್‌ ಸ್ಥಳದಲ್ಲಿ ಮೃತಪಟ್ರೆ ಇನ್ನೊಬ್ಬ ಬೈಕ್ ಸವಾರ ಗಂಭೀರ ಗಾಯಗೊಂಡ ಚೆನ್ನಂಗೊಲ್ಲಿ ನಿವಾಸಿ ಪೌಲೋಸ್ ಅವರನ್ನು ಹೆಚ್ಚಿನ ಚಿಕಿತ್ಸೆ ಗೆ ಮೈಸೂರಿಗೆ ಕರೆದೊಯ್ಯುವ ಸಂದರ್ಭ ದಾರಿ ಮದ್ಯೆ ಸಾವನಪ್ಪಿದ್ದಾರೆ. ಖಾಸಗಿ ಬಸ್ ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿದೆ. ಪ್ರಯಾಣಿಕರನ್ನು ಪಡೆಯುವ ಸಲುವಾಗಿ ತಡರಾತ್ರಿ ಈ ಭಾಗದಲ್ಲಿ ಕೇರಳದ ಖಾಸಗಿ ಬಸ್ ಗಳು ನಡೆಸುವ ಪೈಪೋಟಿ ಈ ಘಟನೆಗೆ ಕಾರಣವಾಗಿದೆ. ಸದ್ಯ
ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಬಸ್ ಅನ್ನು ಪೊಲೀಸರ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು