2:46 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

ಉದ್ಯಮಿಯ ಅಪಹರಿಸಿ ಹಣ ಸುಲಿಗೆ ಪ್ರಕರಣ: ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ

07/02/2026, 17:37

ಬೆಂಗಳೂರು(reporterkarnataka.com):ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉದ್ಯಮಿ ಮನೋಜ್ ಕುಮಾರ್‌ ಅವರಿಗೆ ಪರಿಚಿತನಾಗಿದ್ದ ರಾಜೇಶ್‌ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್‌ ಒತ್ತಡ ಹೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು