6:55 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ನಂಜನಗೂಡು | ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾಡಿ ಗರ್ಭಿಣಿಯರಿಗೆ ಸೀಮಂತ ಸಮಾರಂಭ

07/02/2026, 20:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕ್ಯಾಚಿಂಗ್ ಹಾರ್ಟ್ಸ್ ಫೌಂಡೇಷನ್ ಬೆಂಗಳೂರು, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್, ಸರಗೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ,ಪ್ರಾಥಮಿಕ ಆರೋಗ್ಯ ಕೇಂದ್ರ ಅಣ್ಣೂರು ಇವರ ಸಹಯೋಗದಲ್ಲಿ,ಹಾಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು.


ಕಾರ್ಯ ಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಟಿ. ಅವರು ಅಧ್ಯಕ್ಷತೆಯನ್ನು ವಹಿಸಿ,ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಬೆಂಗಳೂರು ಪೂರ್ವ, ಕೆ ಆರ್. ಪುರ ದ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಕ್ಯಾಪ್ಟನ್ ಡಾ. ರಘುನಾಥ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ರಾಹುಲ್ ಮುತ್ತುಸ್ವಾಮಿ ವಿವೇಕಾನಂದ ಮೂಮೆಂಟ್ ಸಂಸ್ಥೆಯ ವ್ಯವಸ್ಥಾಪಕರಾದ ವೆಂಕಟಸ್ವಾಮಿ. ಉಪಸ್ಥಿತರಿದ್ದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ ರವಿಕುಮಾರ್ ಅವರು ಮಾತನಾಡಿ, ಈ ದಿನ ಅಣ್ಣೂರ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಕಾಡು ಪ್ರದೇಶ ದಲ್ಲಿ ವಾಸ ಮಾಡುವ ಹಾಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಸುತ್ತಿರುವುದು ತುಂಬಾ ಸಂತೋಷಕರವಾದ ವಿಷಯ. ಇದಕ್ಕೆ ಸಹಕರಿಸಿದ ಕ್ಯಾಚಿಂಗ್ ಆರ್ಟ್ಸ್ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು,
ಗರ್ಭಿಣಿಯ ಆರೋಗ್ಯ ಮತ್ತು ಸಂತೋಷಕ್ಕಾಗಿ 7ನೇ ಅಥವಾ 8ನೇ ತಿಂಗಳಲ್ಲಿ ಆಚರಿಸುವ ಸೀಮಂತ ಹಿಂದೂ ಸಂಪ್ರದಾಯವಾಗಿದೆ. ಇದು ಭ್ರೂಣದ ಬೆಳವಣಿಗೆಯ ಹಂತದಲ್ಲಿ ಆಕೆಗೆ ಧೈರ್ಯ ತುಂಬಲು, ಹಿರಿಯರ ಆಶೀರ್ವಾದ ಪಡೆಯಲು, ಮತ್ತು ಹೂವು-ಸೀರೆ ನೀಡಿ, ಸಿಹಿ ತಿಂಡಿಗಳನ್ನು ಬಡಿಸಿ ಆಕೆಯನ್ನು ಸಂಭ್ರಮಿಸುವ ಕಾರ್ಯಕ್ರಮವಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿ ಹಾಡಿ ಗರ್ಭಿಣಿ ಸ್ತ್ರೀಯರು ಇದರ ಸದುಪಯೋಗಪಡಿಸಿಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವಂತೆ ಸಲಹೆ ಸೂಚನೆ ನೀಡಿದರು.
ಕಾರ್ಯ ಕ್ರಮದಲ್ಲಿ ,ಕ್ಯಾಚಿಂಗ್ ಆರ್ಟ್ಸ್ ಸಂಸ್ಥೆಯ ಶುಶ್ರೂಷಕಾಧಿಕಾರಿ ಸೌಮ್ಯ,VMH ಸಂಯೋಜಕರಾದ ರಾಜೇಶ್, ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿಯ ಸಿಬ್ಬಂದಿ ವರ್ಗದವರಾದ ಶರಣಪ್ಪ, ಅಶೀಮಾ ಸುಲ್ತಾನ್,ರವಿರಾಜ್,ಅರ್ಚನಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದರಾದ. ದಿವ್ಯಾ ,ಸುಜಾತ, ಅಶ್ವಿನಿ, ವೀರೇಶ್, ಕೃಷ್ಣ ಲೋಕೇಶ್, ಪರಶಿವ ,ನೇತ್ರ . ಆಶಾ ಕಾರ್ಯಕರ್ತೆಯರು ಹಾಗು ಗರ್ಭಿಣಿಯರು, ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು