1:01 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಕೊಡಗಿ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ: ಪತ್ನಿ ಗಂಭೀರ, ಇಬ್ಬರು ಮಕ್ಕಳು ಪಾರು

08/02/2026, 11:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿಯೊಬ್ಬರು, ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಕಿ ಹಚ್ಚಿಕೊಂಡಿದ್ದು, ಇವರ ಪೈಕಿ
ಉದ್ಯಮಿ ಸಾವನ್ನಪ್ಪಿದ್ದರೆ, ಪತ್ನಿ ಹಾಗೂ ಮಕ್ಕಳು ಪಾರಾಗಿದ್ದಾರೆ.
ಈ ದುರಂತದಲ್ಲಿ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಇವರ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ನಡೆದಿದ್ದೇನು:?*
ಉದ್ಯಮಿ ಸಜೀರ್​​​, ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು