5:47 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು

08/02/2026, 12:00

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸಮೀಪದ ಆನೆಕಾಡು ಬಳಿ ರಸ್ತೆಯಲ್ಲೇ ಕ್ರೇಟಾ ಕಾರು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.
ಚಲಿಸುತ್ತಿದ್ದ ಪ್ರವಾಸಿ ಕಾರಿನಲ್ಲಿ ಅಗ್ನಿ ಅವಘಡ ರಾತ್ರಿ 9.45 ರ ಸಮಯದಲ್ಲಿ ಆನೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಐವರು ಪ್ರವಾಸಿಗರು ಹುಂಡೈ ಕ್ರೇಟಾ ಕಾರಿನಲ್ಲಿ ಮಡಿಕೇರಿಯಿಂದ ಕುಶಾಲನಗರ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭ ಮಾರ್ಗಮಧ್ಯದ ಆನೆಕಾಡು ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅದರೊಳಗೆ ಇದ್ದವರು ಹೊರಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಅಗ್ನಿಯ ಕೆನ್ನಾಲಿಗೆಗೆ ಕಾರು ಧಹಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು