6:47 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಾಹನ ಅಪಘಾತದಲ್ಲಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಶವ ಪತ್ತೆ; ವಿಳಾಸ ಪತ್ತೆಗೆ ಕೋರಿಕೆ

09/09/2021, 18:33

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ50 ಕರೇಕಲ್ ಬಗಡಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂದಾಜು 45 ವರ್ಷ ಪ್ರಾಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಗುರುತು ಪತ್ತೆಗೆ ಸಾರ್ವಜನಿಕರಲ್ಲಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಕೋರಿದ್ದಾರೆ. 

ಮೇಲ್ನೋಟಕ್ಕೆ ಮೃತವ್ಯಕ್ತಿ ಮಾನಸಿಕ ಅಸ್ವಸ್ಥನೋ ಅಥವಾ ಭಿಕ್ಷುಕನ ತರಹ ಕಂಡು ಬಂದಿದೆ.

ಆತನು ನಡೆದುಕೊಂಡು ತೆರಳುವಾಗ ಯಾವುದೋ ವಾಹನ ಈತನಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ  ತಲೆ ಹಾಗೂ ಕಾಲು ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂದಿಸಿದಂತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ವಿಳಾಸ ಪತ್ತೆಗಾಗಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆಯವರು ಪ್ರಕಟಣೆ ನೀಡಿದ್ದು,ಚಹರೆ ಹಾಗೂ ವಿವರ ಗಳಿಂದ ಮೃತ ವ್ಯಕ್ತಿಯ  ವಿಳಾಸ ಅಥಾವ ಮಾಹಿತಿ ಯಾರಿಗಾದರೂ ತಿಳಿದು ಬಂದಲ್ಲಿ ಕೂಡಲೇ ಕೂಡ್ಲಿಗಿ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ,ಅಗತ್ಯ ಮಾಹಿತಿ ನೀಡಿ ವಿಳಾಸ ಪತ್ತೆಗೆ ನೆರವು ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು