1:00 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೆಟ್ರೋ ದರ ಏರಿಕೆ: ಖಾಲಿ ಟ್ರಂಕ್ ಹಿಡಿದು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಿರತ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

09/02/2026, 12:07

ಬೆಂಗಳೂರು(reporterkarnataka.com): ನಮ್ಮ ಮೆಟ್ರೋ ಟಿಕೆಟ್‌ ದರ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಇಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಟೀಕಿಸಿ ಸಂಸದ ತೇಜಸ್ವಿ ಸೂರ್ಯ ಆರ್‌.ವಿ. ರಸ್ತೆ ಮೆಟ್ರೋ ನಿಲ್ದಾಣಕ್ಕೆ ಖಾಲಿ ಟ್ರಂಕ್ ಹಿಡಿದುಕೊಂಡು ಆಗಮಿಸಿದರು. ಅಲ್ಲದೇ ಆರ್‌.ವಿ. ರಸ್ತೆಯಿಂದ ನ್ಯಾಷನಲ್ ಕಾಲೇಜಿಗೆ ಮೆಟ್ರೋ ಟಿಕೆಟ್ ಪಡೆದು, ಟ್ರಂಕ್ ಜೊತೆಗೆ ಪ್ರಯಾಣಿಸಲು ಮುಂದಾದರು. ಆದರೆ ಮೆಟ್ರೋ ಏರುವ ಮೊದಲು ಪೊಲೀಸರು ಅವರನ್ನು ತಡೆದರು. ಸಂಸದರನ್ನು ಹಾಗೂ ಅವರ ಕೈಯಲ್ಲಿದ್ದ ಟ್ರಂಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾತನಾಡಿದ ಸಂಸದ ತೇಜಸ್ವಿ ಸೂರ್ಯ ʼನಾನು ಪ್ರತಿಭಟನೆ ಮಾಡುತ್ತಿಲ್ಲ. ಟಿಕೆಟ್ ತೆಗೆದುಕೊಂಡು ಸಾಮಾನ್ಯ ಪ್ರಯಾಣಿಕನಂತೆ ಮೆಟ್ರೋ ಏರಲು ಬಂದಿದ್ದೇನೆ. ನನ್ನ ಕೈಯಲ್ಲಿರುವ ಖಾಲಿ ಟ್ರಂಕ್ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕ. ಸರ್ಕಾರವೇ ಹೇಳುವಂತೆ ಖಜಾನೆ ಖಾಲಿಯಾಗಿದೆʼ ಎಂದು ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು