10:01 PM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

09/02/2026, 22:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಈ ಘಟನೆ ಮೂಡಿಗೆರೆ ತಾಲ್ಲೂಕಿನಲ್ಲಿ ಮತ್ತೆ ಚಿರತೆ ಭೀತಿಯನ್ನು ಹೆಚ್ಚಿಸಿದ್ದು, ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು