7:00 PM Thursday12 - February 2026
ಬ್ರೇಕಿಂಗ್ ನ್ಯೂಸ್
ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ…

ಇತ್ತೀಚಿನ ಸುದ್ದಿ

ಕೊನೆಗೂ ಸೋನಿಯಾ ಗಾಂಧಿ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್: ನಡೆಯದ ಸಿಎಂ ಕುರ್ಚಿ ಚರ್ಚೆ?

12/02/2026, 18:46

ನವದೆಹಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ರಾಜ್ಯ ನಾಯಕತ್ವ ವಿಚಾರ ಚರ್ಚೆಯಲ್ಲಿರುವಾಗಲೇ ಶಿವಕುಮಾರ್ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಅಸ್ಸಾಂ ಚುನಾವಣೆ ತಯಾರಿಗೆ ಸಭೆ ನಡೆಸಲು ದೆಹಲಿಗೆ ತೆರಳಿದ್ದರು. ಸ್ವತಃ ಎಐಸಿಸಿಯಿಂದ ಡಿಕೆಶಿಗೆ ಬುಲಾವ್ ಬಂದಿತ್ತು. ಆದರೆ ದೆಹಲಿಗೆ ಹೋದ ಡಿಕೆಶಿ ಅಸ್ಸಾಂ ಚುನಾವಣೆ ಜೊತೆಗೆ ರಾಜ್ಯ ನಾಯಕತ್ವದ ವಿಚಾರವನ್ನೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೆ ತಡರಾತ್ರಿ ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದಾದ ಬಳಿಕ ಸೋನಿಯಾ ಗಾಂಧಿಯವರನ್ನೂ ಕೊನೆಗೂ ಡಿಕೆಶಿ ಭೇಟಿ ಮಾಡಿದ್ದಾರೆ. ಅಸ್ಸಾಂ ಕಾಂಗ್ರೆಸ್ ನಾಯಕರೊಂದಿಗೆ ಡಿಕೆಶಿ, ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಆದರೆ ಈ ವೇಳೆ ಕೇವಲ ಅಸ್ಸಾಂ ಚುನಾವಣೆ ವಿಚಾರವಾಗಿಯೇ ಮಾತುಕತೆ ನಡೆಸಿಲ್ಲ ಎನ್ನಲಾಗಿದೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ದೆಹಲಿಗೆ ಬಂದ ಮೇಲೆ ರಾಜಕೀಯ ಚರ್ಚೆ ಮಾಡೇ ಮಾಡ್ತೇವೆ. ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಆದರೆ ಏನು ಚರ್ಚೆ ಮಾಡಿದ್ದೇನೆ ಎಂಬುದನ್ನೆಲ್ಲಾ ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು