12:49 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಚಂದ್ರಮೌಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಕ್ಕಳಿಗೆ ಜಂತುಹುಳು ಮಾತ್ರೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ

13/02/2026, 14:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಮಾನ್ಯ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಚಾಲನೆಯನ್ನು ನೀಡಿದರು.


ಸಂದರ್ಭದಲ್ಲಿ ಮಾತನಾಡಿ 1-19 ವರ್ಷದ ಮಕ್ಕಳಿಗೆ, ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಜಂತುಹುಳು ಮಾತ್ರೆಯನ್ನು ನೀಡುತ್ತಿದ್ದೇವೆ, ನಮ್ಮ ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಯ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಮಾತ್ರೆಯನ್ನು ನೀಡಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ತಿಳಿಸಿದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಟಿ.ರವರು ಮಾತನಾಡಿ ಈ ದಿನ ರಾಜ್ಯದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣ ದಿನ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಎಚ್ ಡಿ ಕೋಟೆ ತಾಲೂಕಿನಲ್ಲಿ ಒಟ್ಟು 252 ಅಂಗನವಾಡಿಗಳಲ್ಲಿ 7355 ಮಕ್ಕಳು, 151 ಶಾಲೆಗಳಲ್ಲಿ 21 735 ಮಕ್ಕಳುಗಳಿದ್ದು ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಜಂತುಹುಳು ನಿವಾರಣ ಮಾತ್ರೆಯನ್ನು ನೀಡುತ್ತಿದ್ದೇವೆ ಹಾಗೂ ದಿನಾಂಕ 16.2.2026ರಂದು ಮಾಪಾ ಆಫ್ ಡೇ ಎಂದು ಮಾಡಿ ಈ ದಿನ ಬಿಟ್ಟು ಹೋಗಿರೋ ಮಕ್ಕಳಿಗೆ ದಿನಾಂಕ 16 ರಂದು ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿನಗರ ಸಭೆ ಸದಸ್ಯರಾದ ಪ್ರದೀಪ್ ಕುಮಾರ್. ಗ್ರಾಮ ಅಧ್ಯಕ್ಷರಾದ ಮಹೇಶ್, ಊರಿನ ಮುಖಂಡರಾದ ಮಂಚ್ಚಯ್ಯ, ಮಾಜಿ ಅಧ್ಯಕ್ಷರಾದ ದಿನೇಶ್ , ವೈದ್ಯಾಧಿಕಾರಿಗಳಾದ ಡಾ.ಚಂದ್ರಕಲ, ಸಿಬ್ಬಂದಿ ವರ್ಗದವರಾದ ರವಿರಾಜ್, ದೊರೆ, ಜಯಂತಿ, ಶಶಿಕಲಾ, ಗ್ರಾಮದ ಮುಖಂಡರು, ಮಕ್ಕಳು, ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು