2:38 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಚಂದ್ರಮೌಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಕ್ಕಳಿಗೆ ಜಂತುಹುಳು ಮಾತ್ರೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ

13/02/2026, 14:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಮಾನ್ಯ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಚಾಲನೆಯನ್ನು ನೀಡಿದರು.


ಸಂದರ್ಭದಲ್ಲಿ ಮಾತನಾಡಿ 1-19 ವರ್ಷದ ಮಕ್ಕಳಿಗೆ, ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಜಂತುಹುಳು ಮಾತ್ರೆಯನ್ನು ನೀಡುತ್ತಿದ್ದೇವೆ, ನಮ್ಮ ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಯ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಮಾತ್ರೆಯನ್ನು ನೀಡಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ತಿಳಿಸಿದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಟಿ.ರವರು ಮಾತನಾಡಿ ಈ ದಿನ ರಾಜ್ಯದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣ ದಿನ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಎಚ್ ಡಿ ಕೋಟೆ ತಾಲೂಕಿನಲ್ಲಿ ಒಟ್ಟು 252 ಅಂಗನವಾಡಿಗಳಲ್ಲಿ 7355 ಮಕ್ಕಳು, 151 ಶಾಲೆಗಳಲ್ಲಿ 21 735 ಮಕ್ಕಳುಗಳಿದ್ದು ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಜಂತುಹುಳು ನಿವಾರಣ ಮಾತ್ರೆಯನ್ನು ನೀಡುತ್ತಿದ್ದೇವೆ ಹಾಗೂ ದಿನಾಂಕ 16.2.2026ರಂದು ಮಾಪಾ ಆಫ್ ಡೇ ಎಂದು ಮಾಡಿ ಈ ದಿನ ಬಿಟ್ಟು ಹೋಗಿರೋ ಮಕ್ಕಳಿಗೆ ದಿನಾಂಕ 16 ರಂದು ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿನಗರ ಸಭೆ ಸದಸ್ಯರಾದ ಪ್ರದೀಪ್ ಕುಮಾರ್. ಗ್ರಾಮ ಅಧ್ಯಕ್ಷರಾದ ಮಹೇಶ್, ಊರಿನ ಮುಖಂಡರಾದ ಮಂಚ್ಚಯ್ಯ, ಮಾಜಿ ಅಧ್ಯಕ್ಷರಾದ ದಿನೇಶ್ , ವೈದ್ಯಾಧಿಕಾರಿಗಳಾದ ಡಾ.ಚಂದ್ರಕಲ, ಸಿಬ್ಬಂದಿ ವರ್ಗದವರಾದ ರವಿರಾಜ್, ದೊರೆ, ಜಯಂತಿ, ಶಶಿಕಲಾ, ಗ್ರಾಮದ ಮುಖಂಡರು, ಮಕ್ಕಳು, ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು