ಇತ್ತೀಚಿನ ಸುದ್ದಿ
ಪಿರಿಯಾಪಟ್ಟಣದಲ್ಲಿ ಕೇರಳ ಲಾಟರಿ ಮಾರಾಟ: ಇಬ್ಬರ ಬಂಧನ, 22 ಸಾವಿರಕ್ಕೂ ಅಧಿಕ ನಗದು ವಶ
13/02/2026, 21:05
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ₹ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಲಾಟರಿ ಟಿಕೆಟ್ ಮತ್ತು ₹22, 930 ನಗದು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಅಪರಾಧ ಪತ್ತೆ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಅರುಣ್ ಕುಮಾರ್ ಹಾಗೂ ಸ್ವಾಮಿ ಬಂಧಿತರು.
ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಮಲ್ಲಿಕ್ ಹಾಗೂ ನಾಗೇಶ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಗೋವಿಂದರಾಜು, ಪಿಎಸ್ಐ ಜಗದೀಶ್, ಎಎಸ್ಐ ಸತೀಶ್ ಸಿಬ್ಬಂದಿಗಳಾದ ಅಬ್ದುಲ್ ಲತೀಫ್, ಅಶೋಕ್, ಭಾಸ್ಕರ್ ಕಾರ್ಯಾಚರಣೆ ಭಾಗವಹಿಸಿದ್ದರು.












