ಇತ್ತೀಚಿನ ಸುದ್ದಿ
ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವನಿಗೆ ಗಾಯ
14/02/2026, 22:08
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರಪೇಟೆ ಸಮೀಪದ ಕೋತಿ ಗ್ರಾಮದ ಸಿ.ಜೆ. ಸಂದೀಪ್ (41) ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ಕಾಫಿ ತೋಟದಲ್ಲಿ ಕೆಲಸ ಮುಗಿಸಿ ದೊಡ್ಡ ತೋಳೂರು ಗ್ರಾಮದ ಪ್ರಸನ್ನ ಅವರನ್ನು ಅವರ ಮನೆಗೆ ಬಿಡಲು ಸಂದೀಪ್ ತಮ್ಮ ಬೈಕಿನಲ್ಲಿ ತೆರಳುತ್ತಿದ್ದರು.
ಈ ವೇಳೆ ತೋಳೂರು-ಶೆಟ್ಟಳ್ಳಿ ಸಮೀಪದ ಇನಕನಹಳ್ಳಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಅಪ್ಪಳಿಸಿದೆ. ಡಿಕ್ಕಿ ಹೊಡೆದ ಪರಿಣಾಮ ಸಂದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಹಿಂಬದಿ ಸವಾರ ಪ್ರಸನ್ನ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.













