8:54 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ: ಸಂಚಾರ ಬದಲಾವಣೆ

15/02/2026, 12:10

ಮಂಗಳೂರು(reporterkarnataka.com): ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ಫೆ. 15ರಿಂದ ಜೂನ್ 15ರವರೆಗೆ 4 ತಿಂಗಳುಗಳ ಕಾಲ ನಡೆಯಲಿದ್ದು, ಸಂಚಾರ ಬದಲಾವಣೆ ಮಾಡಲಾಗಿದೆ.
ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ ರಸ್ತೆಗಳನ್ನು ತಾತ್ಕಾಲಿಕವಾಗಿ ಎಕಮುಖ ರಸ್ತೆಗಳನ್ನಾಗಿ ಮಾರ್ಪಾಡು ಮಾಡಲಾಗಿದ್ದು, ಸದ್ರಿ ರಸ್ತೆಯಲ್ಲಿ ವಾಹನ ದಟ್ಟನೆ ಉಂಟಾಗಲಿದ್ದು, ಸಾರ್ವಜನಿಕರು ಈ ಕೆಳಗಿನ ರಸ್ತೆಯನ್ನು ಉಪಯೋಗಿಸಬಹುದಾಗಿದೆ.

* ಪಂಪ್‌ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ, ಕಂಕನಾಡಿ ಹಳೇ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

*ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಪರ್ಯಾಯ ರಸ್ತೆಯಾದ ಮಹಾಕಾಳಿಪಡ್ಪು, ಮಾರ್ಗನ್ಸ್ ಗೇಟ್, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸುವುದು.

*ಬಿ.ಸಿ ರೋಡ್ ಕಡೆಯಿಂದ ಬರುವಂತಹ ಭಾರಿ ವಾಹನಗಳು, ಇತರೆ ವಾಹನಗಳು ಮತ್ತು ಲಾಲ್‌ಬಾಗ್ ಬಸ್ಸು ನಿಲ್ದಾಣಕ್ಕೆ ತೆರಳುವ KSRTC ಬಸ್ಸುಗಳು ಪಡೀಲ್ ಜಂಕ್ಷನ್‌ನಿಂದ ನಂತೂರು ಕಡೆಗೆ ಹಾಗೂ ಕೇರಳ-ಕಾಸರಗೋಡು ಕಡೆಯಿಂದ ಕರಾವಳಿ ಕಡೆಗೆ ಬರುವ ಭಾರಿ ವಾಹನಗಳು ಮತ್ತು KSRTC ಬಸ್ಸುಗಳು ಪಂಪ್‌ವೆಲ್ ಜಂಕ್ಷನ್ ನಿಂದ ನಂತೂರು ಕಡೆಗೆ ಸಂಚರಿಸುವುದು.

*ಮಂಗಳೂರು ನಗರದ ಒಳಭಾಗದಿಂದ ಕರಾವಳಿ ಜಂಕ್ಷನ್ ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಯಥವಾತ್ತಾಗಿ ಸಂಚರಿಸುವುದು.

*ಕಂಕನಾಡಿ ಜಂಕ್ಷನ್-ಪಂಪುವೆಲ್ ರಸ್ತೆ(ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ-ಕಂಕನಾಡಿ ರಸ್ತೆ, ಕಂಕನಾಡಿ-ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ-ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

ಈ ಕಾಮಗಾರಿ ಮತ್ತು ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು