9:02 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ: ಸಂಚಾರ ಬದಲಾವಣೆ

15/02/2026, 12:10

ಮಂಗಳೂರು(reporterkarnataka.com): ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ಫೆ. 15ರಿಂದ ಜೂನ್ 15ರವರೆಗೆ 4 ತಿಂಗಳುಗಳ ಕಾಲ ನಡೆಯಲಿದ್ದು, ಸಂಚಾರ ಬದಲಾವಣೆ ಮಾಡಲಾಗಿದೆ.
ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ ರಸ್ತೆಗಳನ್ನು ತಾತ್ಕಾಲಿಕವಾಗಿ ಎಕಮುಖ ರಸ್ತೆಗಳನ್ನಾಗಿ ಮಾರ್ಪಾಡು ಮಾಡಲಾಗಿದ್ದು, ಸದ್ರಿ ರಸ್ತೆಯಲ್ಲಿ ವಾಹನ ದಟ್ಟನೆ ಉಂಟಾಗಲಿದ್ದು, ಸಾರ್ವಜನಿಕರು ಈ ಕೆಳಗಿನ ರಸ್ತೆಯನ್ನು ಉಪಯೋಗಿಸಬಹುದಾಗಿದೆ.

* ಪಂಪ್‌ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ, ಕಂಕನಾಡಿ ಹಳೇ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

*ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಪರ್ಯಾಯ ರಸ್ತೆಯಾದ ಮಹಾಕಾಳಿಪಡ್ಪು, ಮಾರ್ಗನ್ಸ್ ಗೇಟ್, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸುವುದು.

*ಬಿ.ಸಿ ರೋಡ್ ಕಡೆಯಿಂದ ಬರುವಂತಹ ಭಾರಿ ವಾಹನಗಳು, ಇತರೆ ವಾಹನಗಳು ಮತ್ತು ಲಾಲ್‌ಬಾಗ್ ಬಸ್ಸು ನಿಲ್ದಾಣಕ್ಕೆ ತೆರಳುವ KSRTC ಬಸ್ಸುಗಳು ಪಡೀಲ್ ಜಂಕ್ಷನ್‌ನಿಂದ ನಂತೂರು ಕಡೆಗೆ ಹಾಗೂ ಕೇರಳ-ಕಾಸರಗೋಡು ಕಡೆಯಿಂದ ಕರಾವಳಿ ಕಡೆಗೆ ಬರುವ ಭಾರಿ ವಾಹನಗಳು ಮತ್ತು KSRTC ಬಸ್ಸುಗಳು ಪಂಪ್‌ವೆಲ್ ಜಂಕ್ಷನ್ ನಿಂದ ನಂತೂರು ಕಡೆಗೆ ಸಂಚರಿಸುವುದು.

*ಮಂಗಳೂರು ನಗರದ ಒಳಭಾಗದಿಂದ ಕರಾವಳಿ ಜಂಕ್ಷನ್ ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಯಥವಾತ್ತಾಗಿ ಸಂಚರಿಸುವುದು.

*ಕಂಕನಾಡಿ ಜಂಕ್ಷನ್-ಪಂಪುವೆಲ್ ರಸ್ತೆ(ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ-ಕಂಕನಾಡಿ ರಸ್ತೆ, ಕಂಕನಾಡಿ-ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ-ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

ಈ ಕಾಮಗಾರಿ ಮತ್ತು ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು