9:49 PM Friday17 - April 2026
ಬ್ರೇಕಿಂಗ್ ನ್ಯೂಸ್
ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ…

ಇತ್ತೀಚಿನ ಸುದ್ದಿ

ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

15/02/2026, 13:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರು ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ.
ಸಾರಿಗೆ ಬಸ್‌ಗಳು ಮತ್ತು ಆಟೋ ನಡುವೆ ಈ ಡಿಕ್ಕಿ ನಡೆದಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಲಿಸುತ್ತಿದ್ದ ಬಸ್‌ನ ಬ್ರೇಕ್ ದಿಢೀರ್ ಕೈಕೊಟ್ಟಿದ್ದರಿಂದ ನಿಯಂತ್ರಣ ತಪ್ಪಿದ ಬಸ್ ಮುಂದಿದ್ದ ಮತ್ತೊಂದು ನಗರ ಸಾರಿಗೆ ಬಸ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ.ಈ ವೇಳೆ ಡಿಕ್ಕಿಯ ರಭಸಕ್ಕೆ ಮುಂದಕ್ಕೆ ಚಲಿಸಿದ ಬಸ್ ತನ್ನ ಮುಂದಿದ್ದ ಆಟೋ ರಿಕ್ಷಾಕ್ಕೂ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತಕ್ಕೆ ಕಾರಣವಾಯಿತು.ಅಪಘಾತದ ತೀವ್ರತೆಗೆ ಎರಡು ಸರ್ಕಾರಿ ಬಸ್‌ಗಳು ಹಾಗೂ ಒಂದು ಆಟೋ ರಿಕ್ಷಾ ಸ್ಥಳದಲ್ಲೇ ಜಖಂಗೊಂಡಿವೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲವಾದರೂ, ವಾಹನಗಳು ರಸ್ತೆಯ ಮಧ್ಯದಲ್ಲೇ ನಿಂತಿದ್ದರಿಂದ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಸುತ್ತಮುತ್ತ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಬ್ರೇಕ್ ಫೇಲ್ ಆಗಿರುವ ಬಗ್ಗೆ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಾರಿಗೆ ಬಸ್‌ಗಳ ನಿರ್ವಹಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು