8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

15/02/2026, 13:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರು ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ.
ಸಾರಿಗೆ ಬಸ್‌ಗಳು ಮತ್ತು ಆಟೋ ನಡುವೆ ಈ ಡಿಕ್ಕಿ ನಡೆದಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಲಿಸುತ್ತಿದ್ದ ಬಸ್‌ನ ಬ್ರೇಕ್ ದಿಢೀರ್ ಕೈಕೊಟ್ಟಿದ್ದರಿಂದ ನಿಯಂತ್ರಣ ತಪ್ಪಿದ ಬಸ್ ಮುಂದಿದ್ದ ಮತ್ತೊಂದು ನಗರ ಸಾರಿಗೆ ಬಸ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ.ಈ ವೇಳೆ ಡಿಕ್ಕಿಯ ರಭಸಕ್ಕೆ ಮುಂದಕ್ಕೆ ಚಲಿಸಿದ ಬಸ್ ತನ್ನ ಮುಂದಿದ್ದ ಆಟೋ ರಿಕ್ಷಾಕ್ಕೂ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತಕ್ಕೆ ಕಾರಣವಾಯಿತು.ಅಪಘಾತದ ತೀವ್ರತೆಗೆ ಎರಡು ಸರ್ಕಾರಿ ಬಸ್‌ಗಳು ಹಾಗೂ ಒಂದು ಆಟೋ ರಿಕ್ಷಾ ಸ್ಥಳದಲ್ಲೇ ಜಖಂಗೊಂಡಿವೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲವಾದರೂ, ವಾಹನಗಳು ರಸ್ತೆಯ ಮಧ್ಯದಲ್ಲೇ ನಿಂತಿದ್ದರಿಂದ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಸುತ್ತಮುತ್ತ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಬ್ರೇಕ್ ಫೇಲ್ ಆಗಿರುವ ಬಗ್ಗೆ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಾರಿಗೆ ಬಸ್‌ಗಳ ನಿರ್ವಹಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು