4:01 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

74ನೇ ಸಾರ್ವಜನಿಕ ಗಣೇಶೋತ್ಸವ: ಮಂಗಳೂರಿನ ಸಂಘನಿಕೇತನಕ್ಕೆ ಪಾರ್ವತಿತನಯ ವಿಗ್ರಹ; ನಮಿಸಿದ ಭಕ್ತ ಜನ

09/09/2021, 19:24

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):

ನಗರದ ಮಣ್ಣಗುಡ್ಡೆಯ ಪ್ರತಾಪ್ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 74ನೇ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ವಿನಾಯಕನ ವಿಗ್ರಹವನ್ನು ಗುರುವಾರ ಸಂಜೆ ಸಂಘನಿಕೇತನಕ್ಕೆ ಸರಳ ಮೆರವಣಿಗೆಯಲ್ಲಿ ವೈಭವದಿಂದ ತರಲಾಯಿತು.

 

 

ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು. ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಗುವುದು  ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ ಪೂಜೆ ಬಳಿಕ ಮಂಗಳಾರತಿ ನಡೆಯಲಿದೆ . ಐದು ದಿನಗಳ ಪರ್ಯಂತ ಸಂಘನಿಕೇತನದಲ್ಲಿ ನಡೆಯಲಿದ್ದು , ಮಹಾಮಾರಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಪ್ರಕಾರ ಎಲ್ಲ ರೀತಿಯಲ್ಲಿ ನಿಯಮ ಪಾಲಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದ್ರೆಯಾಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ . ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ರಘುವೀರ್ ಕಾಮತ್ , ವಿನೋದ್ ಶೆಣೈ , ಜೀವನರಾಜ್ ಶೆಣೈ , ಸತೀಶ್ ಪ್ರಭು , ಸುರೇಶ ಕಾಮತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು