1:08 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

74ನೇ ಸಾರ್ವಜನಿಕ ಗಣೇಶೋತ್ಸವ: ಮಂಗಳೂರಿನ ಸಂಘನಿಕೇತನಕ್ಕೆ ಪಾರ್ವತಿತನಯ ವಿಗ್ರಹ; ನಮಿಸಿದ ಭಕ್ತ ಜನ

09/09/2021, 19:24

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):

ನಗರದ ಮಣ್ಣಗುಡ್ಡೆಯ ಪ್ರತಾಪ್ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 74ನೇ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ವಿನಾಯಕನ ವಿಗ್ರಹವನ್ನು ಗುರುವಾರ ಸಂಜೆ ಸಂಘನಿಕೇತನಕ್ಕೆ ಸರಳ ಮೆರವಣಿಗೆಯಲ್ಲಿ ವೈಭವದಿಂದ ತರಲಾಯಿತು.

 

 

ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು. ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಗುವುದು  ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ ಪೂಜೆ ಬಳಿಕ ಮಂಗಳಾರತಿ ನಡೆಯಲಿದೆ . ಐದು ದಿನಗಳ ಪರ್ಯಂತ ಸಂಘನಿಕೇತನದಲ್ಲಿ ನಡೆಯಲಿದ್ದು , ಮಹಾಮಾರಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಪ್ರಕಾರ ಎಲ್ಲ ರೀತಿಯಲ್ಲಿ ನಿಯಮ ಪಾಲಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದ್ರೆಯಾಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ . ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ರಘುವೀರ್ ಕಾಮತ್ , ವಿನೋದ್ ಶೆಣೈ , ಜೀವನರಾಜ್ ಶೆಣೈ , ಸತೀಶ್ ಪ್ರಭು , ಸುರೇಶ ಕಾಮತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು