6:37 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಾಣಿ ಜಂಕ್ಷನ್ ನಲ್ಲಿ ರಸ್ತೆ ಅಪಘಾತ: ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂ; ಪವಾಡಸದೃಶ ಚಾಲಕರು ಪಾರು

16/02/2026, 19:13

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಮಾಣಿ – ಮೈಸೂರು ಜಂಕ್ಷನ್ ನಲ್ಲಿ ಸೋಮವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕರು ಪವಾಡಸದೃಶ್ಯ ಪಾರಾಗಿದ್ದಾರೆ.
ಬೆಳಗ್ಗೆ 7.15ರ‌ ಹೊತ್ತಿಗೆ ಫ್ಲೈ ಓವರ್ ಕೆಳಗಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದು ಡಿಕ್ಕಿ‌ ಹೊಡೆದಿದೆ. ಇದರ ಪರಿಣಾಮ ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದೆ. ವಾಹನ ಚಾಲಕರಿಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಫ್ಲೈ ಓವರ್ ಕೆಳಗಡೆಯೇ ಇರುವ ಈ ಜಂಕ್ಷನ್ ನಲ್ಲಿ ಸ್ವಲ್ಪ ಗಮನ ತಪ್ಪಿದರೂ ಅಪಘಾತವಾಗುವ ಸಂಭವ ಇದೆ. ಇಲ್ಲಿ ಕಾಮಗಾರಿ ಇನ್ನೂ ಪೂರ್ತಿಯಾಗಿಲ್ಲ. ಉಪ್ಪಿನಂಗಡಿ ಕಡೆಯಿಂದ ಬರುವ ಸರ್ವಿಸ್ ರಸ್ತೆಗೆ ಹಂಪ್ಸ್ ಹಾಕುವುದರಿಂದ ಅಪಘಾತ ತಪ್ಪಿಸಬಹುದೆಂದು ಸ್ಥಳೀಯ ರಿಕ್ಷಾ ಚಾಲಕರ‌ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು