4:59 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸಾರಾಯಿ, ಮಟ್ಕಾ ದಂಧೆ: ಪೊಲೀಸ್ ಇಲಾಖೆ ಮಾತ್ರ ಘೋರ ಮೌನ!

10/09/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಿಲ್ಲೆಯಲ್ಲಿ ಅಕ್ರಮ ದಂಧೆಗಳು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಟ್ಕಾ, ಜುಗಾರಿ, ಸಾರಾಯಿ ಚಟುವಟಿಕೆ ಯಾವುದೇ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜಿಲ್ಲೆಯ ಯುವಪೀಳಿಗೆ ಸಾರಾಯಿ, ಮಟ್ಕಾದ ದಾಸರಾಗುತ್ತಿದ್ದಾರೆ. ಆದರೆ ಪೊಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ಪ್ರತಿ ಗ್ರಾಮಗಳಲ್ಲಿ, ಹೋಬಳಿ ಮಟ್ಟಗಳಲ್ಲಿ ಅಕ್ರಮ ಚಟುವಟಿಕೆಗಳು ಜೋರಾಗಿ

ನಡೆಯುತ್ತಿದೆ. ಆದರೆ ಪೊಲೀಸ್ ಇಲಾಖೆ  ಸುಮ್ಮನಾಗಿರುವುದು ಹಲವು ಸಂಶಯಗಳಿಗೆ ದಾರಿ ಮಾಡಿ ಕೊಟ್ಟಿದೆ. ಸಾರ್ವಜನಿಕ  ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ.ಬಡ ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗ್ಗೆ ಟೀ ಕುಡಿಯದಿದ್ದರೂ ಪರವಾಗಿಲ್ಲ.ಯುವಕರಿಗೆ ಸಾರಾಯಿ ಮಾತ್ರ ಬೇಕು. ಇಂದಿನ ದಿನಗಳಲ್ಲಿ ದುಡಿದರು ಜೀವನ ಸಾಯಿಸುವುದು ಕಷ್ಟ. ಹಾಗಿರುವಾಗ ಬೆಳಗ್ಗೆನೇ ಯುವಕರು ಮದ್ಯಕ್ಕೆ ಮೊರೆ ಹೋದರೆ ಹೇಗೆ ಎಂದು ಹಿರಿಯರು ತಲೆ ಬಿಸಿ ಮಾಡಿಕೊಳ್ಳುತ್ತಾರೆ. ಸಾರಾಯಿ ಜತೆ ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆಯೂ ಬಹಳಷ್ಟು ಸಕ್ರೀಯವಾಗಿದೆ. ಮನೆ ಸೊತ್ತು ಮಾರಿ ಮಟ್ಕಾ ಆಟವಾಡುತ್ತಿರುವ ಹಲವು ಪ್ರಸಂಗಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಂಡು ಬಡ ಕುಟುಂಬಗಳನ್ನು ರಕ್ಷಿಸ ಬಹುದಲ್ಲ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಕುಡಿತದಿಂದ ಸಣ್ಣ ಯುವಕರು ಹಾಳಾಗುತ್ತಿದ್ದಾರೆ. ತಂದೆ-ತಾಯಿಯರ ಕೇಳೋರೆ ಇಲ್ಲ. ಬಡ ಕುಟುಂಬಗಳು ಬೀದಿಗೆ ಬರಬಾರದು, ಯುವಕರು ಹಾಳಾಗಬಾರದು ಎಂದರೆ ಜಿಲ್ಲೆಯ ಪೊಲೀಸರು ತಾವೇ ಖುದ್ದಾಗಿ ಫೀಲ್ಡಿಗಿಳಿದು ಜಿಲ್ಲೆಗಳ ಪ್ರತಿ ಗ್ರಾಮಗಳಲ್ಲಿ ಸರ್ಚ್ ಮಾಡುವುದು ಇಂದಿನ ತುರ್ತು ಅಗತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು