2:04 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಫೆ.23ರಂದು ಉದ್ಯೋಗ ಮೇಳ; ಪೋಸ್ಟರ್ ಬಿಡುಗಡೆ ಮಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

18/02/2026, 20:10

ದಾವಣಗೆರೆ(reporterkarnata.com): ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಅನ್ನು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ‌ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು ಜಿಲ್ಲಾಡಳಿತ, ಜಿ.ಪಂ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಜಿಲ್ಲಾ ಕೌಶಲ್ಯ ಮಿಷನ್,ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಮಹಾನಗರ ಪಾಲಿಕೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಐಟಿ ವಲಯ, ಫೈನಾನ್ಸ್, ಬ್ಯಾಂಕಿಂಗ್, ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್, ಬಿ.ಪಿ.ಒ, ವಾಯ್ಸ್, ರೀಟೈಲ್, ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.
ಉದ್ಯೋಗ ಹುಡುಕುತ್ತಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು