ಇತ್ತೀಚಿನ ಸುದ್ದಿ
Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ
19/02/2026, 13:58
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕಾಡಾನೆಗಳ ಆವಾಸ ತಾಣವಾಗಿರುವ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಕಾಡಾನೆಯೊಂದು ಚಲಿಸುತ್ತಿದ್ದ ಕಾರು ಮೇಲೆ ದಾಳಿ ನಡೆಸಿದ್ದು ಕಾರು ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿದ್ದಾಪುರ ಸಮೀಪದ ಕೆಸುವಿನಹಳ್ಳ ಬಳಿ ಅಮ್ಮತ್ತಿಯ ಪುಲಿಯೇರಿ ಗ್ರಾಮದ ಪ್ರಜಿತ್ ಮೈಸೂರು ಕಡೆಯಿಂದ ಬರುತ್ತಿದ್ದ ವೇಳೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ತಕ್ಷಣ ರಸ್ತೆಯಲ್ಲೇ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಹಿಂಭಾಗಕ್ಕೆ ಬಂದ ಒಂಟಿ ಸಲಗ ಕಾರಿನ ಮೇಲೆ ದಾಳಿ ನಡೆಸಿ ಕಾರನ್ನು ನಜ್ಜು ಗುಜ್ಜು ಮಾಡಿದೆ, ಸಂಪೂರ್ಣ ಘಟನೆ ನಡೆಯುವ ವರೆಗೂ ಆತಂಕದಲ್ಲೇ ಕಾರಿನಲ್ಲೇ ಕುಳಿತಿದ್ದ ಪ್ರಜಿತ್ ಮತ್ತು ಇತರೆ ಪ್ರಯಾಣಿಕರು ಪ್ರಾಣಪಾಯ ದಿಂದ ಪಾರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ರಸ್ತೆ ಭಾಗದಲ್ಲಿ ಆನೆಗಳು ಓಡಾಡುತ್ತಿದ್ದು, ಅರಣ್ಯ ಇಲಾಖೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡದೆ ಇರುವುದು ದುರಂತ.












