4:53 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

19/02/2026, 13:58

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಡಾನೆಗಳ ಆವಾಸ ತಾಣವಾಗಿರುವ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಕಾಡಾನೆಯೊಂದು ಚಲಿಸುತ್ತಿದ್ದ ಕಾರು ಮೇಲೆ ದಾಳಿ ನಡೆಸಿದ್ದು ಕಾರು ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಸಿದ್ದಾಪುರ ಸಮೀಪದ ಕೆಸುವಿನಹಳ್ಳ ಬಳಿ ಅಮ್ಮತ್ತಿಯ ಪುಲಿಯೇರಿ ಗ್ರಾಮದ ಪ್ರಜಿತ್ ಮೈಸೂರು ಕಡೆಯಿಂದ ಬರುತ್ತಿದ್ದ ವೇಳೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ತಕ್ಷಣ ರಸ್ತೆಯಲ್ಲೇ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಹಿಂಭಾಗಕ್ಕೆ ಬಂದ ಒಂಟಿ ಸಲಗ ಕಾರಿನ ಮೇಲೆ ದಾಳಿ ನಡೆಸಿ ಕಾರನ್ನು ನಜ್ಜು ಗುಜ್ಜು ಮಾಡಿದೆ, ಸಂಪೂರ್ಣ ಘಟನೆ ನಡೆಯುವ ವರೆಗೂ ಆತಂಕದಲ್ಲೇ ಕಾರಿನಲ್ಲೇ ಕುಳಿತಿದ್ದ ಪ್ರಜಿತ್ ಮತ್ತು ಇತರೆ ಪ್ರಯಾಣಿಕರು ಪ್ರಾಣಪಾಯ ದಿಂದ ಪಾರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ರಸ್ತೆ ಭಾಗದಲ್ಲಿ ಆನೆಗಳು ಓಡಾಡುತ್ತಿದ್ದು, ಅರಣ್ಯ ಇಲಾಖೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡದೆ ಇರುವುದು ದುರಂತ.

ಇತ್ತೀಚಿನ ಸುದ್ದಿ

ಜಾಹೀರಾತು