6:24 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Chikkamagaluru | ಬಣಕಲ್ ಶ್ರೀಕಲ್ಲನಾಥೇಶ್ವರ ರಥೋತ್ಸವ: ಜಾತ್ರೆಗೆ ಸಂಭ್ರಮದ ತೆರೆ

19/02/2026, 15:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿರುವ ಶ್ರೀಕಲ್ಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವವು ಮಂಗಳವಾರ ಸಂಜೆ ಸಂಭ್ರಮದಿಂದ ನಡೆಯಿತು.


ಭಾನುವಾರ ಮಹಾಶಿವರಾತ್ರಿ ರುದ್ರಾಭಿಷೇಕ, ನಿತ್ಯ ಪೂಜೆ, ಪುಣ್ಯ ವಾಚನ,ಗಣಪತಿ ಪೂಜೆ, ನಡೆಯಿತು.ಅಂಕುರ ಪೂಜೆ,ದ್ವಜ ರೋಹಣ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸೋಮವಾರ ಗಿರಿಜಾ ಕಲ್ಯಾಣ,ದೇವರ ರಥರೋಹಣ ನಡೆಯಿತು. ಮಂಗಳವಾರ ಭಕ್ತರು ಮಡಿಯಾಗಿ ಶ್ರೀಕಲ್ಲನಾಥೇಶ್ವರ ಸ್ವಾಮಿಗೆ ಹಣ್ಣು ಕಾಯಿ,ದಾನ್ಯ ಅರ್ಪಿಸಿದರು. ಸಂಜೆ ಜಾತ್ರೆಯಲ್ಲಿ ಕಿಕ್ಕಿರಿದ ಜನ ಸಮೂಹದ ನಡುವೆ ಭಕ್ತರು ದೇವಸ್ಥಾನದ ಹೆಬ್ಬಾಗಿಲ ತನಕ ರಥ ಎಳೆದು ಸಂಭ್ರಮಿಸಿದರು. ಜಾತ್ರೆಯಲ್ಲಿ ಸುತ್ತಾಡಿ ಮಕ್ಕಳು ತಿಂಡಿ ತಿನಿಸು ಆಟಿಕೆಗಳನ್ನು ತೆಗೆದುಕೊಳ್ಳುತ್ತಿರುವ ದೃಶ್ಯ ಕಂಡು ಬಂತು. ಸಂಜೆ ರಥೋತ್ಸವದಲ್ಲಿ ಬಣಕಲ್, ಕೂಡಹಳ್ಳಿ,ಕೊಟ್ಟಿಗೆಹಾರ,ತರುವೆ,ದೇವನಗೂಲ್, ಬಾಳೂರು,ಫಲ್ಗುಣಿ,ಚೇಗು,ಕೋಗಿಲೆ ಮತ್ತಿತರ ಗ್ರಾಮದ ಗ್ರಾಮಸ್ಥರು ಸೇರಿ ಸಂಭ್ರಮದ ರಥೋತ್ಸವ ಹಾಗೂ ಜಾತ್ರೋತ್ಸವದಲ್ಲಿ ಪಾಲ್ಗೂಂಡು ಸ್ವಾಮಿಯ ಕೃಪೆಗೆ ಪಾತ್ರರಾದರು. ತಾಲ್ಲೂಕಿನ ಗಣ್ಯರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು. ಬುಧವಾರದಂದು ಅವಭೃತ ಸ್ನಾನ(ನೀರೋಕಳಿ) ನಡೆದು ಸಂಭ್ರಮದ ಜಾತ್ರೆಗೆ ತೆರೆ ಎಳೆಯಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎಸ್.ದಿವ್ಯ ಪ್ರಸಾದ್, ಕಾರ್ಯದರ್ಶಿ ಬಿ.ಆರ್.ಅಭಿಲಾಷ್, ಗೌರವ ಕಾರ್ಯದರ್ಶಿ ಬಿ.ಸಿ.ಪ್ರವೀಣ್ ಹಾಗೂ ಸಮಿತಿಯ ಸದಸ್ಯರು,ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು