1:53 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

Chikkamagaluru | ಬಣಕಲ್ ಶ್ರೀಕಲ್ಲನಾಥೇಶ್ವರ ರಥೋತ್ಸವ: ಜಾತ್ರೆಗೆ ಸಂಭ್ರಮದ ತೆರೆ

19/02/2026, 15:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿರುವ ಶ್ರೀಕಲ್ಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವವು ಮಂಗಳವಾರ ಸಂಜೆ ಸಂಭ್ರಮದಿಂದ ನಡೆಯಿತು.


ಭಾನುವಾರ ಮಹಾಶಿವರಾತ್ರಿ ರುದ್ರಾಭಿಷೇಕ, ನಿತ್ಯ ಪೂಜೆ, ಪುಣ್ಯ ವಾಚನ,ಗಣಪತಿ ಪೂಜೆ, ನಡೆಯಿತು.ಅಂಕುರ ಪೂಜೆ,ದ್ವಜ ರೋಹಣ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸೋಮವಾರ ಗಿರಿಜಾ ಕಲ್ಯಾಣ,ದೇವರ ರಥರೋಹಣ ನಡೆಯಿತು. ಮಂಗಳವಾರ ಭಕ್ತರು ಮಡಿಯಾಗಿ ಶ್ರೀಕಲ್ಲನಾಥೇಶ್ವರ ಸ್ವಾಮಿಗೆ ಹಣ್ಣು ಕಾಯಿ,ದಾನ್ಯ ಅರ್ಪಿಸಿದರು. ಸಂಜೆ ಜಾತ್ರೆಯಲ್ಲಿ ಕಿಕ್ಕಿರಿದ ಜನ ಸಮೂಹದ ನಡುವೆ ಭಕ್ತರು ದೇವಸ್ಥಾನದ ಹೆಬ್ಬಾಗಿಲ ತನಕ ರಥ ಎಳೆದು ಸಂಭ್ರಮಿಸಿದರು. ಜಾತ್ರೆಯಲ್ಲಿ ಸುತ್ತಾಡಿ ಮಕ್ಕಳು ತಿಂಡಿ ತಿನಿಸು ಆಟಿಕೆಗಳನ್ನು ತೆಗೆದುಕೊಳ್ಳುತ್ತಿರುವ ದೃಶ್ಯ ಕಂಡು ಬಂತು. ಸಂಜೆ ರಥೋತ್ಸವದಲ್ಲಿ ಬಣಕಲ್, ಕೂಡಹಳ್ಳಿ,ಕೊಟ್ಟಿಗೆಹಾರ,ತರುವೆ,ದೇವನಗೂಲ್, ಬಾಳೂರು,ಫಲ್ಗುಣಿ,ಚೇಗು,ಕೋಗಿಲೆ ಮತ್ತಿತರ ಗ್ರಾಮದ ಗ್ರಾಮಸ್ಥರು ಸೇರಿ ಸಂಭ್ರಮದ ರಥೋತ್ಸವ ಹಾಗೂ ಜಾತ್ರೋತ್ಸವದಲ್ಲಿ ಪಾಲ್ಗೂಂಡು ಸ್ವಾಮಿಯ ಕೃಪೆಗೆ ಪಾತ್ರರಾದರು. ತಾಲ್ಲೂಕಿನ ಗಣ್ಯರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು. ಬುಧವಾರದಂದು ಅವಭೃತ ಸ್ನಾನ(ನೀರೋಕಳಿ) ನಡೆದು ಸಂಭ್ರಮದ ಜಾತ್ರೆಗೆ ತೆರೆ ಎಳೆಯಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎಸ್.ದಿವ್ಯ ಪ್ರಸಾದ್, ಕಾರ್ಯದರ್ಶಿ ಬಿ.ಆರ್.ಅಭಿಲಾಷ್, ಗೌರವ ಕಾರ್ಯದರ್ಶಿ ಬಿ.ಸಿ.ಪ್ರವೀಣ್ ಹಾಗೂ ಸಮಿತಿಯ ಸದಸ್ಯರು,ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು