6:23 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ

10/09/2021, 07:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕೆ ಮಾರ್ಗ ಸೂಚಿಗಳನ್ನು ಮೀರಿ ಸಾಮರಸ್ಯಕ್ಕೆ ಧಕ್ಕೆ ತರುವಂತೆ ವರ್ತಿಸಬೇಡಿ ಎಂದು ಹೇಳಿದರು.  

ತಹಸಿಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಈಗಾಗಲೇ ಮುಂಬಯಿ ಸೇರಿದಂತೆ ಹಲವೆಡೆ ಮೂರನೇ ಆಲೆಯ ಲಕ್ಷ್ಮಣಗಳು ಹೆಚ್ಚಾಗಿವೆ. ಅಥಣಿಯಲ್ಲಿ ಶೇ. 40ರಷ್ಟು ಕೊರೊನಾ ಪ್ರಾಥಮಿಕ ಲಕ್ಷ್ಮಣಗಳಾದ ಕೆಮ್ಮು, ನೆಗಡಿ, ಕಫ ಮುಂತಾದ ಲಕ್ಷ್ಮಣಗಳು ಗೋಚರಿಸುತ್ತಿವೆ. 

ಅಂದು ಗಣಪತಿ ಸ್ಥಾಪನೆ ಮಾಡಿ ಬ್ರೀಟಿಷರನ್ನು ಓಡಿಸಿದಂತೆ ಇಂದು ಕೊರೊನಾ ಓಡಿಸುವ ಅಗತ್ಯವಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು . ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಢಿ, ತಾಪ ಕಾನಿ ಅಧಿಕಾರಿ ಶೇಖರ ಕರಬಸಪ್ಪಗೋಳ, ಗ್ರೇಡ 2 ತಹಶೀಲ್ದಾರ್ ಮಹಾದೇವ ಬಿರಾದಾರ, ಪಿಎಸ್ ಐ ಕುಮಾರ ಹಾಡಕರ, ಅಪರಾಧ ವಿಬಾಗದ ಪಿಎಸ್ ಐ ರವಿಂದ್ರ ನಾಯಿಕವಾಡಿ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು