ಇತ್ತೀಚಿನ ಸುದ್ದಿ
Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ
19/02/2026, 18:37
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmil.com
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಹಳ್ಳ ಶಿಲ್ಪಿ ಎಸ್ಟೇಟ್ ನಲ್ಲಿ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವನಪ್ಪಿರುವ ಘಟನೆ ನಡೆದಿದೆ.
ಟ್ರ್ಯಾಕ್ಟರ್ ಚಾಲಕ ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪ್ರವೀಣ್ ಪೂಜಾರ್ (35) ಮೃತ ದುರ್ದೈವಿ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.












