10:38 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಭಯ ಬೇಡ, ಕೆಎಂಎಫ್‌ ಉತ್ಪನ್ನಗಳು ತುಂಬಾ ಸೇಫ್‌: ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

20/02/2026, 20:20

ಬೆಂಗಳೂರು(reporterkarnataka.com): ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್​​ ಕೆಎಂಎಫ್​​ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್​ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಇದು ಶುದ್ಧ ಸುಳ್ಳು ಎಂದಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.​

*ಆರೋಪ ಶುದ್ಧ ಸುಳ್ಳು ಎಂದ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ:*
ಕೆಎಂಎಫ್‌ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತೆ ಅಂತಾ ಡಾ.ಶರಣ್ಯ ಸಂತೋಷ್‌ ಎಂಬುವವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಇನ್ನು ಈ ಬಗ್ಗೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಮಾತನಾಡಿದ್ದು, ಇದು ಶುದ್ಧ ಸುಳ್ಳು ಕೆಎಂಎಫ್‌ ಉತ್ಪನ್ನ ನೈಸರ್ಗಿಕವಾಗಿ ತಯಾರಿಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದುವರೆಗೂ ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಕೆಎಂಎಫ್‌ ಉತ್ಪನ್ನಗಳಿಗೆ ಯಾವುದೇ ಕೆಮಿಕಲ್ ಹಾಕಲ್ಲ. ಈಗಾಗಲೇ ಡಾ.ಶರಣ್ಯ ಸಂತೋಷ್‌ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ, ಜನರ ದಿಕ್ಕು ತಪ್ಪಿಸುವ ಕೆಲಸಬೇಡ. ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರೆ ಕ್ರಮಕೈಗೊಳ್ಳಲಾಗುತ್ತದೆ. ಕೆಎಂಎಫ್‌ ಉತ್ಪನ್ನಗಳು ತುಂಬಾ ಸೇಫ್‌, ಯಾವುದೇ ಭಯವಿಲ್ಲದೆ ಬಳಸುವಂತೆ ಗ್ರಾಹಕರಿಗೆ ಬಿ.ಶಿವಸ್ವಾಮಿ ಮನವಿ ಮಾಡಿದ್ದಾರೆ.

*ಕೆಎಂಎಫ್​​ನ ಎಲ್ಲಾ ಉತ್ಪನ್ನಗಳು ಸೇಫ್​*
ಕೆಎಂಎಫ್ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಉತ್ಪನ್ನಗಳು ಸೇಫ್​​ ಎಂಬ ವರದಿ ಬಂದಿದೆ. ಮೈಸೂರು ಪಾಕ್, ಮಿಲ್ಕ್ ಪೇಡಾ, ಪನ್ನೀರ್, ವೆನಿಲಾ ಮಿಲ್ಕ್ ಸೇಕ್​​ ಸೇರಿದಂತೆ ಎಲ್ಲಾ ಉತ್ಪನ್ನಗಳು ಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು