1:13 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ

10/09/2021, 08:11

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಸಕ ಕೆ.ಆರ್‌.ರಮೇಶ್ ಕುಮಾರ್ ಆಗ್ರಹಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರನ್ನು ಭೇಟಿಯಾಗಿ ಅವರು ಸಾಂತ್ವಾನ ಹೇಳಿದರು.

ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯರನ್ನು ಕೇಸ್‌ನಲ್ಲಿ ಸೇರಿಸಿರುವುದು ದುರದೃಷ್ಟಕರ. ಇದು ಅವರನ್ನು ಹೆದರಿಸಿ , ಮೊಕದ್ದಮೆ ವಾಪಸ್ ಪಡೆಯುವಂತೆ ಮಾಡಲು ಮಾಡಿರುವ ತಂತ್ರವಾಗಿದೆ.

ಪೊಲೀಸರು ಅಮಾಯಕ ಹೆಣ್ಣು ಮಕ್ಕಳನ್ನು ಕೇಸ್‌ನಲ್ಲಿ ಸೇರಿಸಿ ಮಾನಸಿಕ ಹಿಂಸೆ ನೀಡುವುದು ಸರಿಯಲ್ಲ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರಿಗೆ ತೆಲಂಗಾಣ ಪೊಲೀಸರು ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಅಂಥ ಧೈರ್ಯ ಪ್ರದರ್ಶಿಸಬೇಕಾಗಿದೆ ಎಂದು ಹೇಳಿದರು. 

ವಿಳಾಸ ಗೊತ್ತಿದೆ , ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಹೀಗಿದ್ದೂ , ಅವರನ್ನು ಹಿಡಿಯದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ. ಆದ್ದರಿಂದ ಎರಡು ದಿನಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ , ಡಿವೈಎಸ್ಪಿ ಕೆ.ಸಿ.ಗಿರಿ, ತಾಲ್ಲೂಕು ವೈದ್ಯಾಧಿಕಾರಿ ಡಾ . ಎಂ.ಸಿ.ವಿಜಯ , ಆಸ್ಪತ್ರೆ ಆಡಳಿತಾಧಿಕಾರಿ ಡಿ . ಶ್ರೀನಿವಾಸ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಶ್ರೀನಿವಾಸನ್ , ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ , ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು