1:45 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮಿಸ್ಸಿಂಗ್: ಕಾಡು ಸಲಗನ ದಾಳಿಯಿಂದ ತಪ್ಪಿಸಿಕೊಳ್ಳಲು ಕಾಡಿನೊಳಗೆ ಪಲಾಯನ

20/02/2026, 22:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮದವೇರಿದ್ದ ಕಾಡಾನೆ ಕಂಡು ಹಿಂದಿರುಗುವಾಗ ದಾರಿ ತಪ್ಪಿ ಸಾಕಾನೆಯೇ ಮಿಸ್ ಆಗಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ 5 ದಿನಗಳ ಹಿಂದೆ ಕಾಫಿ ತೋಟದಲ್ಲಿ ಕಾರ್ಮಿಕನನ್ನ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ರಾಜ್ಯದ ವಿವಿಧ ದುಬಾರೆಗಳಿಂದ 7 ಸಾಕಾನೆಗಳು ಬಂದಿದ್ದವು. ನಿನ್ನೆಯಿಂದ ಕಾರ್ಯಾಚರಣೆ ಕೂಡ ಆರಂಭಗೊಂಡಿತ್ತು. ಆದರೆ, ಇಂದು ಸಾಕಾನೆ ಜೂನಿಯರ್ ಅರ್ಜುನನ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಾಗಿ ಹುಡುಕಾಟ ನಡೆಸುತ್ತಿದ್ದಾಗ ಮದವೇರಿದ್ದ ಕಾಡಾನೆ ಏಕಾಏಕಿ ದಾಳಿಗೆ ಮುಂದಾಗಿದೆ. ಈ ಕಾದಾಟದ ಸಂದರ್ಭದಲ್ಲಿ ಜೂನಿಯರ್ ಅರ್ಜುನ ಕಾಡಿನೊಳಗೆ ಓಡಿಹೋಗಿ ಒಂದು ಗಂಟೆಗಳ ಕಾಲ ನಾಪತ್ತೆಯಾಗಿದ್ದ. ಅರಣ್ಯದಲ್ಲಿ ಸಾಕಾನೆಯೇ ಮಿಸ್ ಆಗಿದ್ದರಿಂದ ಅಧಿಕಾರಿಗಳು ಹಾಗೂ ಇ.ಟಿ.ಎಫ್ ಸಿಬ್ಬಂದಿಗಳು ಒಂದು ಗಂಟೆಗಳ ಕಾಲ ತೀವ್ರ ಹುಡುಕಾಟ ನಡೆಸಿ ಅರ್ಜುನನನ್ನ ಪತ್ತೆ ಹಚ್ಚಿದ್ದಾರೆ. ಒಂದೆಡೆ ಮದವೇರಿದ್ದ ಕಾಡಾನೆ ಭೀತಿ. ಮತ್ತೊಂದೆಡೆ ಕಾರ್ಯಾಚರಣೆಯ ಪ್ರಮುಖ ಆನೆಯೇ ನಾಪತ್ತೆಯಾದ ಕಾರಣ ಅರಣ್ಯಾಧಿಕಾರಿಗಳು ಮತ್ತು ಇಟಿಎಫ್ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು ಒಂದು ಗಂಟೆಗಳ ಕಾಲ ಅರಣ್ಯದಾದ್ಯಂತ ಹುಡುಕಾಡಿದ ಬಳಿಕ ಕೊನೆಗೂ ಜೂನಿಯರ್ ಅರ್ಜುನ ಪತ್ತೆಯಾಗಿದ್ದು ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಆನೆಯನ್ನು ಸುರಕ್ಷಿತವಾಗಿ ಕಟ್ಟಿ ಹಾಕಲಾಗಿದ್ದು ಮದವೇರಿದ ಕಾಡಾನೆಯ ಉಗ್ರ ರೂಪದಿಂದಾಗಿ ಸದ್ಯಕ್ಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಸಿಬ್ಬಂದಿಗಳು ಹಿಂದಿರುಗಿದ್ದಾರೆ. ಬಲಿಷ್ಠ ಗಂಡು ಕಾಡಾನೆಗೆ ಮದವೇರಿರುವುದರಿಂದ ಅರಣ್ಯಾಧಿಕಾರಿಗಳಿಗೆ ಕಾಡಾನೆ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದೆ. ಸುತ್ತಮುತ್ತಲಿನ ಹಳ್ಳಿಗರು, ಕಾಫಿ ತೋಟದ ಕಾರ್ಮಿಕರು, ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು