10:56 PM Friday20 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮಿಸ್ಸಿಂಗ್: ಕಾಡು ಸಲಗನ ದಾಳಿಯಿಂದ ತಪ್ಪಿಸಿಕೊಳ್ಳಲು ಕಾಡಿನೊಳಗೆ ಪಲಾಯನ

20/02/2026, 22:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ಸೆರೆಗೆ ಹೋಗಿದ್ದ ಸಾಕಾನೆ ಮದವೇರಿದ್ದ ಕಾಡಾನೆ ಕಂಡು ಹಿಂದಿರುಗುವಾಗ ದಾರಿ ತಪ್ಪಿ ಸಾಕಾನೆಯೇ ಮಿಸ್ ಆಗಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ 5 ದಿನಗಳ ಹಿಂದೆ ಕಾಫಿ ತೋಟದಲ್ಲಿ ಕಾರ್ಮಿಕನನ್ನ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ರಾಜ್ಯದ ವಿವಿಧ ದುಬಾರೆಗಳಿಂದ 7 ಸಾಕಾನೆಗಳು ಬಂದಿದ್ದವು. ನಿನ್ನೆಯಿಂದ ಕಾರ್ಯಾಚರಣೆ ಕೂಡ ಆರಂಭಗೊಂಡಿತ್ತು. ಆದರೆ, ಇಂದು ಸಾಕಾನೆ ಜೂನಿಯರ್ ಅರ್ಜುನನ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಾಗಿ ಹುಡುಕಾಟ ನಡೆಸುತ್ತಿದ್ದಾಗ ಮದವೇರಿದ್ದ ಕಾಡಾನೆ ಏಕಾಏಕಿ ದಾಳಿಗೆ ಮುಂದಾಗಿದೆ. ಈ ಕಾದಾಟದ ಸಂದರ್ಭದಲ್ಲಿ ಜೂನಿಯರ್ ಅರ್ಜುನ ಕಾಡಿನೊಳಗೆ ಓಡಿಹೋಗಿ ಒಂದು ಗಂಟೆಗಳ ಕಾಲ ನಾಪತ್ತೆಯಾಗಿದ್ದ. ಅರಣ್ಯದಲ್ಲಿ ಸಾಕಾನೆಯೇ ಮಿಸ್ ಆಗಿದ್ದರಿಂದ ಅಧಿಕಾರಿಗಳು ಹಾಗೂ ಇ.ಟಿ.ಎಫ್ ಸಿಬ್ಬಂದಿಗಳು ಒಂದು ಗಂಟೆಗಳ ಕಾಲ ತೀವ್ರ ಹುಡುಕಾಟ ನಡೆಸಿ ಅರ್ಜುನನನ್ನ ಪತ್ತೆ ಹಚ್ಚಿದ್ದಾರೆ. ಒಂದೆಡೆ ಮದವೇರಿದ್ದ ಕಾಡಾನೆ ಭೀತಿ. ಮತ್ತೊಂದೆಡೆ ಕಾರ್ಯಾಚರಣೆಯ ಪ್ರಮುಖ ಆನೆಯೇ ನಾಪತ್ತೆಯಾದ ಕಾರಣ ಅರಣ್ಯಾಧಿಕಾರಿಗಳು ಮತ್ತು ಇಟಿಎಫ್ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು ಒಂದು ಗಂಟೆಗಳ ಕಾಲ ಅರಣ್ಯದಾದ್ಯಂತ ಹುಡುಕಾಡಿದ ಬಳಿಕ ಕೊನೆಗೂ ಜೂನಿಯರ್ ಅರ್ಜುನ ಪತ್ತೆಯಾಗಿದ್ದು ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಆನೆಯನ್ನು ಸುರಕ್ಷಿತವಾಗಿ ಕಟ್ಟಿ ಹಾಕಲಾಗಿದ್ದು ಮದವೇರಿದ ಕಾಡಾನೆಯ ಉಗ್ರ ರೂಪದಿಂದಾಗಿ ಸದ್ಯಕ್ಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಸಿಬ್ಬಂದಿಗಳು ಹಿಂದಿರುಗಿದ್ದಾರೆ. ಬಲಿಷ್ಠ ಗಂಡು ಕಾಡಾನೆಗೆ ಮದವೇರಿರುವುದರಿಂದ ಅರಣ್ಯಾಧಿಕಾರಿಗಳಿಗೆ ಕಾಡಾನೆ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದೆ. ಸುತ್ತಮುತ್ತಲಿನ ಹಳ್ಳಿಗರು, ಕಾಫಿ ತೋಟದ ಕಾರ್ಮಿಕರು, ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು