8:39 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ

21/02/2026, 12:07

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಲಾಲ್‌ಭಾಗ್ ಶಾಖೆಯ ಹನ್ನೊಂದನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ö (ರಿ) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಫೆ. 22ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 12.30ರ ವರೆಗೆ ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಪೌಂಡೇಶನ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಇ.ಸಿ.ಜಿ, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ ತಪಾಸಣೆ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು