7:44 PM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ಒತ್ತಾಯ

21/02/2026, 19:16

ಬೆಂಗಳೂರು(reporterkarnataka.com): ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆ ವಿರುದ್ದ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು.


ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್ ಅವರು ಮಾತನಾಡಿ, ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್ಸಿನವರು ತಮ್ಮ ಕೆಟ್ಟ ಸಂಸ್ಕøತಿಯನ್ನು ಅನಾವರಣ ಮಾಡಿದ್ದಾರೆ. ವಿದೇಶಿ ಅತಿಥಿಗಳ ಸಮ್ಮುಖದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಅವಮಾನ ಮಾಡುವಂತೆ ನಡೆದುಕೊಂಡಿದ್ದು ಖಂಡನೀಯ ಎಂದರು. ಯುವ ಕಾಂಗ್ರೆಸ್ಸಿಗರು ತಮ್ಮ ವರ್ತನೆಗೆ ಬೇಷರತ್ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ಮಾತನಾಡಿ, ಎಐ ಶೃಂಗಸಭೆಯಲ್ಲಿ 30- 35 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದು, ಭಾರತಕ್ಕೆ ಅವಮಾನವಾಗುವ ರೀತಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದರು.
ಭಾರತದಲ್ಲಿ ಉತ್ತಮ ಆವಿಷ್ಕಾರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿಯವರಿಗೂ ಧಿಕ್ಕಾರ ಕೂಗಿದ ಯುವ ಕಾಂಗ್ರೆಸ್ಸಿಗರ ವರ್ತನೆ ಅನಪೇಕ್ಷಣೀಯ ಎಂದು ಹೇಳಿದರು. ಇವರ ವರ್ತನೆಯನ್ನು ಖಂಡಿಸಿ ಸಾರ್ವಜನಿಕರೂ ಒದೆ- ಗೂಸಾ ಕೊಟ್ಟಿದ್ದಾರೆ ಎಂದು ಗಮನ ಸೆಳೆದರು. ಇದನ್ನು ಖಂಡಿಸಿ ಕೆಪಿಸಿಸಿ ಕಚೇರಿಗೂ ಮುತ್ತಿಗೆ ಹಾಕುವುದಾಗಿ ಹೇಳಿದರು.
ಯುವ ಕಾಂಗ್ರೆಸ್ಸಿನವರು ಮಾನ ಮರ್ಯಾದೆ ಇಲ್ಲದವರಂತೆ ನಡೆದುಕೊಂಡಿದ್ದಾರೆ ಎಂದು ದೂರಿದರು. ಅವರನ್ನು ಸಮರ್ಥಿಸುವ ನಾಯಕರ ಕ್ರಮವೂ ಖಂಡನೀಯ ಎಂದು ನುಡಿದರು.
ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾತನಾಡಿ, ಕಾಂಗ್ರೆಸ್ಸಿನವರು ಎಲ್ಲ ಕಾರ್ಯಕ್ರಮ, ಯೋಜನೆಗಳಿಗೆ ತಮ್ಮ ನಾಯಕರಾದ ನೆಹರೂ, ಇಂದಿರಾ, ರಾಜೀವ್ ಗಾಂಧಿಯವರ ಹೆಸರು ಇಟ್ಟುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು.
ನಮ್ಮ ಪ್ರಧಾನಿ ಮೋದಿ ಅವರು ಯಾವುದೇ ಒಂದು ಯೋಜನೆಗೂ ತಮ್ಮ ಹೆಸರನ್ನು ಇಟ್ಟುಕೊಂಡಿಲ್ಲ ಎಂದು ಗಮನ ಸೆಳೆದರು. ದೇಶದ ಮಾನ ಕಳೆಯುವಂತೆ ನಿನ್ನೆ ನಡೆದ ಘಟನೆ ಅತ್ಯಂತ ಖಂಡನೀಯ ಎಂದು ಟೀಕಿಸಿದರು. ಇದೇ ವೇಳೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ಸಿಗರಿಗೆ ಧಿಕ್ಕಾರ ಕೂಗಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮುಖಂಡ ಉಮೇಶ್ ಶೆಟ್ಟಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು