6:09 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯ: ಸಿಟಿ ವಲಯದ ಕಾರ್ಯದರ್ಶಿ ಮತ್ತು ಇಬ್ಬರು ಪ್ರತಿನಿಧಿಗಳ ಆಯ್ಕೆ

22/02/2026, 22:00

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಕಾರ್ಯದರ್ಶಿ ಹಾಗೂ ಇಬ್ಬರು ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ಭಾನುವಾರ ನಡೆಯಿತು.
ನೀರುಮಾರ್ಗ ಚರ್ಚ್ ನ ಉಪಾಧ್ಯಕ್ಷೆ ಉಷಾ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ಹಾಗೂ ಕುಲಶೇಖರ ಚರ್ಚ್ ನ ಉಪಾಧ್ಯಕ್ಷೆ ರೂತ್ ಲೋಬೊ ಮತ್ತು ಕೆಲರಾಯ್ ಚರ್ಚ್ ನ ಪ್ರತಿನಿಧಿ ಸಂತೋಷ್ ಡಿ ಕೋಸ್ತಾ ಅವರು ಸದಸ್ಯರಾಗಿ ಚುನಾಯಿತರಾಗಿದ್ದಾರೆ.
ಸಿಟಿ ವಲಯದ ವ್ಯಾಪ್ತಿಯಲ್ಲಿ ಕುಲಶೇಖರ, ಬೋಂದೆಲ್, ಶಕ್ತಿನಗರ, ಪಾಲ್ದನೆ, ನೀರು ಮಾರ್ಗ, ಕೆಲರಾಯ್, ಬಜ್ಜೋಡಿ, ಬಜಾಲ್, ಆಂಜೆಲೋರ್, ದೇರೆಬೈಲ್, ವಾಮಂಜೂರು, ಫೆರ್ಮಾಯ್ ಸೇರಿದಂತೆ 12 ಚರ್ಚ್ ಚರ್ಚ್ ಗಳಿವೆ.
ಸಿಟಿ ವಲಯದ ವಿಕಾರ್ ವಾರ್ ವಾಮಂಜೂರು ಚರ್ಚ್ ನ ಧರ್ಮಗುರು ವಂದನೀಯ ಫಾ. ಡಾ. ಜೇಮ್ಸ್ ಡಿ ಸೋಜಾ ಅವರು ಚುನಾವಣೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಪಾಲ್ದನೆ ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು