10:12 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಅಮೆರಿಕದ ಸಾಮ್ರಾಜ್ಯಶಾಹಿತ್ವ ಜಗತ್ತಿನಲ್ಲಿ ಅಶಾಂತಿ, ಹಸಿವಿಗೆ ಕಾರಣ: ಹಿರಿಯ ಚಿಂತಕ‌ ಪ್ರೊ. ರಾಜೇಂದ್ರ ಉಡುಪ

22/02/2026, 22:11

ಮಂಗಳೂರಿನಲ್ಲಿ ಕೆಂಪು ಪುಸ್ತಕ ದಿನಾಚರಣೆ, "ಯು ಎಸ್ ಸಾಮ್ರಾಜ್ಯಶಾಹಿ - ಭಾರತದ ಜನತೆಯ ಶತ್ರು" ಪುಸ್ತಕ ಬಿಡುಗಡೆ

ಮಂಗಳೂರು(reporterkarnataka.com): ಅಮೆರಿಕ ಮತ್ತದರ ಕೂಟ ಜಗತ್ತನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಮಿಲಿಟರಿ ಕಾರ್ಯಾಚರಣೆ, ಹಸ್ತಕ್ಷೇಪ, ಆರ್ಥಿಕ ನೀತಿಗಳ ಮೂಲಕ ಜಗತ್ತಿನಲ್ಲಿ ವ್ಯಾಪಕವಾದ ಹಿಂಸೆ, ಹಸಿವಿಗೆ ಕಾರಣವಾಗಿದೆ. ತನ್ನ ತಾಳಕ್ಕೆ ಕುಣಿಯದ ಹಲವು ದೇಶಗಳ ಚುನಾಯಿತ ಸರಕಾರಗಳನ್ನು ಅಮೆರಿಕಾ ಕೆಡವಿದೆ, ಆಂತರಿಕ ದಂಗೆಗೆ ಪ್ರಚೋದಿಸಿ, ತನ್ನ ಕೈಗೊಂಬೆ ಸರಕಾರಗಳನ್ನು ಸ್ಥಾಪಿಸಿದೆ. ಅಮೆರಿಕನ್ ಸಾಮ್ರಾಜ್ಯಶಾಹಿ ಕೂಟವನ್ನು ಅರ್ಥ ಮಾಡಿಕೊಳ್ಳುವಲ್ಲಿ ಮೂರನೆ ಜಗತ್ತಿನ ದೇಶಗಳ ಜನತೆ ಸೋತಿವೆ. ಎರಡನೇ ಮಹಾಯುದ್ಧದ ತರುವಾಯ ಬ್ರಿಟಿಷ್ ವಸಾಹತುಶಾಹಿಯ ಬದಲಿಗೆ ಅಮೆರಿಕಾ ದೊಡ್ಡಣ್ಣನಾಗಿ ವರ್ತಿಸುತ್ತಿದೆ. ಸೋವಿಯತ್ ಯೂನಿಯನ್ ನ ಕುಸಿತದ ತರುವಾಯ ಅಮೆರಿಕಾ ಲಂಗುಲಗಾಮಿಲ್ಲದೆ ವರ್ತಿಸುತ್ತಿದೆ. ಭಾರತದ ವರ್ತಮಾನದ ಬಿಕ್ಕಟ್ಟುಗಳಲ್ಲಿ ಅಮೆರಿಕಾದ ಪಾತ್ರವನ್ನು ನಿರಾಕರಿಸಲು ಸಾಧ್ಯವಿಲ್ಲ. ಭಾರತದ ಜನತೆಯ ನೈಜ ಶತ್ರುವಾದ ಅಮೆರಿಕನ್ ಸಾಮ್ರಾಜ್ಯಶಾಹಿಯನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗಬೇಕು ಎಂದು ಹಿರಿಯ ಚಿಂತಕ, ಪ್ರೊ. ರಾಜೇಂದ್ರ ಉಡುಪ ಹೇಳಿದರು.


ಅವರು ನಗರದಲ್ಲಿ ಸಿಪಿಐಎಂ ಮಂಗಳೂರು ನಗರ ಸಮಿತಿ ಹಮ್ಮಿಕೊಂಡಿದ್ದ ಕೆಂಪು ಪುಸ್ತಕ ದಿನದಲ್ಲಿ “ಯು ಎಸ್ ಸಾಮ್ರಾಜ್ಯಶಾಹಿ, ಭಾರತದ ಜನತೆಯ ಶತ್ರು” ಪುಸ್ತಕ ಬಿಡುಗಡೆ ಮಾಡಿ ಮಾತಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಸಮುದಾಯ ರಂಗ ಚಳವಳಿಯ ವಾಸುದೇವ ಉಚ್ಚಿಲ ವಹಿಸಿದ್ದರು. ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಪಿಐಎಂ ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಸ್ವಾಗತಿಸಿದರು. ಮಂಗಳೂರು ನಗರ ಉತ್ತರ ಸಮಿತಿಯ ಕಾರ್ಯದರ್ಶಿ ಪ್ರಮೀಳಾ ಕೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು