9:42 PM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

23/02/2026, 20:05

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಕರ್ನಾಟಕ‌ ದಲಿತ ಸಂಘರ್ಷ ‌ಸಮಿತಿ ಹಾಗೂ ಬೆಂಗಳೂರಿನ‌ ಸಾಧನ ವೃದ್ದಾಶ್ರಮ ಮತ್ತು ಅನಾಥಾಶ್ರಮದ ಆಶ್ರಯದಲ್ಲಿ
ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಸಾಮ್ರಾಟ್ ಆಶೋಕ್ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಪುನೀತ್ ರಾಜ್ ಕುಮಾರ್ ಕನ್ನಡ ಭವನದಲ್ಲಿ ನಡೆಯಿತು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕ ರಂಗಕ್ಕೆ ದೊಡ್ಡ ಗೌರವಿದೆ ಅದನ್ನು ಗೌರವಿಸಬೇಕು.


ಪತ್ರಿಕ ರಂಗ ಸೇವೆ ಸಲ್ಲಿಸುವವರು ಕಪ್ಪು ಚುಕ್ಕಿ ತರದಂತೆ ಕಾರ್ಯನಿರ್ವಹಿಸಬೇಕು. ಪತ್ರಿಕಾ ವಿತರಕರನ್ನು ಗೌರವಿಸಬೇಕೆಂದು ಹಿರಿಯ ಪತ್ರಕರ್ಯ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ನುಡಿದರು.
ಸಂಪಾದಕ‌ ಡಾ. ಜಲಾನುದ್ದೀನ್ ಅಕ್ಬರ್ ಮಾತನಾಡಿ,ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳನ್ನು ಸರಕಾರ ನೀಡಬೇಕೆಂದು ಹೇಳಿದರು.
ಸಾಧನ ವೃದ್ದಾಶ್ರಮದ ಸಂಸ್ಥಾಪಕರು ಮಾತನಾಡಿ, ಸಮಾಜದಲ್ಲಿ ಪತ್ರಿಕಾ ರಂಗಕ್ಕೆ ದೊಡ್ಡ ಗೌರವ ಇದೆ ಎಂದು ಹೇಳಿದರು.
ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಿ ಮಸ್ಕಿ ಸಾಮ್ರಾಟ್ ಅಶೋಕ್ ಪ್ರಶಸ್ತಿಯನ್ನು ನೀಡಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ
ಬಂಗ್ಲೆ ಮಲ್ಲಿಕಾರ್ಜುನ ಮಾತನಾಡಿ, ಯಾವಾಗಲೂ ನಿಮ್ಮ ಜೊತೆಗಿರುತ್ತೇನೆ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರಡಕಲ್ ಕಾರುಣ್ಯಶ್ರಮದ ಚನ್ನಬಸಯ್ಯಸ್ವಾಮಿ ಕೃಷ್ಣಪ್ಪ, ವಿವಿಧ ಕ್ಷೇತ್ರದಿಂದ ಸಾಧನೆ ಮಾಡಿದ ಪತ್ರಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು