10:12 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ದೇಶದ ಕ್ಷಮೆ ಕೇಳಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

23/02/2026, 21:33

* ಸಿಎಂ-ಡಿಸಿಎಂ ಗುದ್ದಾಟದ ಕಾರಣ 'ದಲಿತ ಸಿಎಂ' ಹೊಸ ಆಯಾಮ ನೀಡುತ್ತಿದ್ದಾರೆ ಅಷ್ಟೇ

* ಇಬ್ಬರ ಜಗಳದಲ್ಲಿ ರಾಜ್ಯದಲ್ಲಿ ಆಡಳಿತ, ಅಭಿವೃದ್ಧಿ ಅಧೋಗತಿಗತಿ

ಬೆಂಗಳೂರು(reporterkarnataka.com): AI ಶೃಂಗಸಭೆಯಲ್ಲಿ ಕಾಂಗ್ರೆಸ್ ವರ್ತನೆ ತೀವ್ರ ಆಘಾತಕಾರಿ ಮತ್ತು ಖೇದಕರವಾಗಿದೆ. ಸ್ವಪಕ್ಷದವರೇ ಆ ನಡೆಯನ್ನು ಟೀಕಿಸಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ನಾಯಕರು ದೇಶದ ಕ್ಷಮೆ ಕೇಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ನ ಈ ನಡೆಗೆ ಅವರ ಪಕ್ಷದವರೇ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಿದರು.
ಮಾರ್ಗರೇಟ್ ಆಳ್ವಾ ಅವರು ‘ಡಿಸಿಪ್ಲೇನ್, ಡಿಗ್ನೆಟಿ ಮತ್ತು ಸೆನ್ಸ್ ‘ ಇರಬೇಕಿತ್ತು ಎಂದಿದ್ದಾರೆ. ಇನ್ನು ಅಖಿಲೇಶ್ ಯಾದವ್ ಸಹ ಇದನ್ನೇ ವಿಭಿನ್ನವಾಗಿ ಹೇಳಿದ್ದಾರೆ. ಕಾಂಗ್ರೆಸ್ಸಿಗರು ಇನ್ನಾದರೂ ಸೌಜನ್ಯದಿಂದ ನಡೆದುಕೊಳ್ಳಲಿ ಎಂದು ಜೋಶಿ ಕಿವಿಮಾತು ಹೇಳಿದರು.
AI ಶೃಂಗ ಸಭೆಯಲ್ಲಿ 29 ವಿವಿಧ ದೇಶಗಳ ಪ್ರಮುಖರು, 45 ಮಂತ್ರಿಗಳು, ದೇಶದ ಉದ್ಯಮ ಪ್ರಮುಖರು, AI ಪ್ರಮುಖರು ಇದ್ದರು. ಇದ್ಯಾವುದನ್ನೂ ಲೆಕ್ಕಿಸದ ರೀತಿ ಕಾಂಗ್ರೆಸ್ ತೀರಾ ತೀರಾ ಅನುಚಿತ ವರ್ತನೆ ತೋರಿದೆ ಎಂದು ಜೋಶಿ ಕಿಡಿ ಕಾರಿದರು.
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಸಿಎಂ ಹುದ್ದೆ ಕಾಳಗದಲ್ಲಿ ರಾಜ್ಯದ ಹಿತವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ‘ಸಿಎಂ ಯಾರಾಗಬೇಕು?’ ಎಂಬುದು ಆ ಪಕ್ಷದವರಿಗೇ ಬಿಟ್ಟ ವಿಚಾರ. ಆದರೆ, ಮುಖ್ಯಮಂತ್ರಿ ಪಟ್ಟದ ಕಾಳಗದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿರುವುದಂತೂ ಸ್ಪಷ್ಟ. ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳು, ಎಲ್ಲೇ ಮೀರಿದ ಭ್ರಷ್ಟಾಚಾರ, ಆಂತರಿಕ ಭಿನ್ನಮತದ ಕಾರಣ ರಾಜ್ಯದ ಸ್ಥಿತಿ ಅಧೋಗತಿ ತಲುಪಿದೆ ಎಂದು ದೂರಿದರು.

*ದಲಿತ ಸಿಎಂ ಮಾಡುವ ನೈಜ ಕಾಳಜಿ ಕಾಂಗ್ರೆಸ್ಸಿಗಿಲ್ಲ:* ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಸಿಎಂ-ಡಿಸಿಎಂ ಕಾದಾಟದ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಈಗದಕ್ಕೆ ‘ದಲಿತ ಸಿಎಂ’ ಎಂಬ ಹೊಸ ಆಯಾಮ ಕೊಡುತ್ತಿದ್ದಾರೆ ಅಷ್ಟೇ, ಆದರೆ, ದಲಿತ ಸಿಎಂ ಮಾಡುವ ನೈಜ ಕಳಕಳಿ ಕಾಂಗ್ರೆಸ್ ನಾಯಕರಿಗೆ ಇಲ್ಲವೆಂದು ಪ್ರಹ್ಲಾದ ಜೋಶಿ ಚಾಟಿ ಬೀಸಿದರು.
ರಾಜ್ಯ ಕಾಂಗ್ರೆಸ್ಸಿಗರಿಗೆ ಹೇಳೋರು-ಕೇಳೋರು ಯಾರೂ ಇಲ್ಲದಂತಾಗಿದೆ. ಸಿಎಂ ಸಿದ್ದರಾಮಯ್ಯ ಶಿಷ್ಯಂದಿರು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಶಿಷ್ಯಂದಿರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಈಗಿನ, ಮುಂದಿನ ಬಜೆಟ್ ಮಂಡಿಸುತ್ತಾರೆ ಎನ್ನೋರು ಕೆಲವರು, ಇದೇ ಇವರ ಲಾಸ್ಟ್ ಬಜೆಟ್ ಇನ್ನೂರು ಎನ್ನೋರು ಮತ್ತೆ ಕೆಲವರು. ಇವರ ಈ ಜಂಜಾಟದಲ್ಲಿ ಆಡಳಿತ ಎನ್ನುವುದು ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
ಸತೀಶ ಜಾರಕಿಹೊಳಿ, ‘ಸರ್ಕಾರದಲ್ಲಿ ಭ್ರಷ್ಟಾಚಾರ ಈ ಮೊದಲೂ ಇತ್ತು’ ಎಂದಿದ್ದಾರೆ. ಅದನ್ನು ರುಜುವಾತು ಪಡಿಸುವಲ್ಲಿ ಇವರು ವಿಫಲರಾಗಿದ್ದಾರೆ. ಆದರೆ, ಇವರ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಜೋಶಿ ಕಿಡಿ ಕಾರಿದರು.

*ರಾಜ್ಯದೆಲ್ಲೆಡೆ ನೀರಿನ ಕ್ಷಾಮ:* ರಾಜ್ಯದಲ್ಲಿ ಆಗಲೇ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಇನ್ನೂ ಫೆಬ್ರವರಿ ತಿಂಗಳಲ್ಲೇ ನೀರಿನ ಕ್ಷಾಮ ಉಂಟಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನೀರಿನ ಬವಣೆ ಹೇಳ ತೀರದು. ರಸ್ತೆಗಳೂ ಅಧೋಗತಿ ಸ್ಥಿತಿ ತಲುಪಿವೆ. ಆದರೆ, ಇವರು ಈ ಮೂಲಭೂತ ಸೌಲಭ್ಯದ ಕಡೆ ಗಮನಹರಿಸೋದು ಬಿಟ್ಟು ಸಿಎಂ ಕುರ್ಚಿ ಗುದ್ದಾಟದಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು ಜೋಶಿ.

*ಚಂದ್ರು ಲಮಾಣಿ ಪ್ರಕರಣ ತನಿಖೆ ಆಗಲಿ:* ಇನ್ನು, ಶಾಸಕ ಚಂದ್ರು ಲಮಾಣಿ ಪ್ರಕರಣ ತನಿಖೆಯಾಗಲಿ. ಸ್ವಾಮೀಜಿ ಅಡಿಯೋ ಕ್ಲಿಪ್ ಹೊರ ಬಂದಿದೆ. ಬೇಕಂತಲೇ ಯಾರೋ ಟ್ರ್ಯಾಪ್ ಮಾಡಿಸಿದ್ದಾರೆಯೇ? ಹೇಗೆ? ಇದರ ಬಗ್ಗೆಯೂ ತನಿಖೆ ಆಗಬೇಕು ಎಂದರು.
ಬೇಸಿಕ್ ಕಲ್ಚರ್ ಇರುವ ಪರಿಣಾಮ ರಾಜ್ಯದಲ್ಲಿ ಕೈಗಾರಿಕೆ, ಅಭಿವೃದ್ಧಿ, ಸಂಪತ್ತು ಎಲ್ಲಾ ಸುಸೂತ್ರವಾಗಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಇದನ್ನು ಹಾಳು ಮಾಡುತ್ತಿದೆ. ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು